ಮಂಡ್ಯ: ತಮಿಳುನಾಡಿಗೆ 15000 ಕ್ಯೂಸೆಕ್ ನೀರು ಹರಿಯಬಿಡಬೇಕು ಎಂದು ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ ಜೋರಾಗಿದೆ.
ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ, ಜಿಲ್ಲೆಯ ಶ್ರೀರಂಗಪಟ್ಟಣ, ಬೆಳಗೋಳ, ಕೆಆರ್ಎಸ್ ಬಳಿ ರೈತ ಸಂಘ, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಶ್ರೀರಂಗಪಟ್ಟಣದ ಬಳಿ ರೈತರು ಕಾವೇರಿ ನದಿಗೆ ಇಳಿದು ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನಮಗೆ ನೀರಿಲ್ಲ. ಹೀಗಿರುವಾಗ ತಮಿಳುನಾಡಿಗ ನೀರು ಬಿಡಬಾರದು ಎಂದು ಮಾಜಿ ಸಂಸದ ಜಿ. ಮಾದೇಗೌಡ ಒತ್ತಾಯಿಸಿದ್ದಾರೆ.
Comments are closed.