ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿ ಸಂಭ್ರಮ ಮರುಕಳಿಸಿದೆ. ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಿಣಿ ವಿವಾಹ ಆದ್ಧೂರಿಯಾಗಿ ನೆರವೇರಲಿದೆ.
ಹೈದರಾಬಾದ್ ಮೂಲದ ಉದ್ಯಮಿಯ ಪುತ್ರನೊಂದಿಗೆ ಬ್ರಹ್ಮಿಣಿ ವಿವಾಹ ನಿಶ್ಚಯವಾಗಿದ್ದು, ನವೆಂಬರ್ 16 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ವೈಭವೋಪೇತ ಮದುವೆ ಸಮಾರಂಭ ನಡೆಯಲಿದೆ. ಮದುವೆಯಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ನಟಿ ಕತ್ರಿನಾ ಕೈಫ್ ಸ್ಟೆಪ್ಸ್ ಹಾಕಲಿದ್ದಾರೆ ಅಂತ ಹೇಳಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಗೂ ಬ್ರಹ್ಮಿಣಿ ಮದುವೆಗೆ ಆಮಂತ್ರಣ ನೀಡಲಾಗುತ್ತಿದೆ. ಬಾಲಿವುಡ್, ಟಾಲಿವುಡ್ ನಟ ನಟಿಯರು, ಕೇಂದ್ರ ಸಚಿವರು ಮದುವೆಯಲ್ಲಿ ಭಾಗಿಯಾಗಲಿದ್ದಾರೆ ಅಂತ ಹೇಳಲಾಗಿದೆ.
Comments are closed.