ಕರ್ನಾಟಕ

ಬೆಳೆ ಹೆಸರಿನಲ್ಲಿ ನೀರು ಹರಿಸಲು ವಿರೋಧ: ಜಗದೀಶ ಶೆಟ್ಟರ್‌

Pinterest LinkedIn Tumblr

25-1440494156-30-jagadishsh

ಬೆಳಗಾವಿ: ಬೆಳೆಗಳಿಗೆ ನೀರು ಬಿಡುವ ನೆಪದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ ಅದಕ್ಕೆ ನಮ್ಮ ವಿರೋಧವಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌ ಹೇಳಿದರು.

ಇಲ್ಲಿನ ಅಶೋಕನಗರದ ಧರ್ಮನಾಥ ಭವನದಲ್ಲಿ ನಡೆಯುತ್ತಿರುವ ಪಕ್ಷದ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಆಗಮಿಸಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ವಿಧಾನಮಂಡಲ ಅಧಿವೇಶನದಲ್ಲಿ ಕೈಗೊಂಡ ನಿರ್ಣಯದಂತೆ ಸರ್ಕಾರ ನಡೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಮಹಾದಾಯಿ ವಿಷಯಕ್ಕೂ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯಬೇಕು ಎಂದು ಆಗ್ರಹಿಸಿದ್ದೇನೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಹಾಗೂ ಸ್ಪೀಕರ್ ಶೀಘ್ರವೆ ದಿನಾಂಕ ನಿಗದಿ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ನಾರಿಮನ್ ಅವರು ಮೇಧಾವಿ ಎನ್ನುವುದರಲ್ಲಿ ಎರಡು ಮಾತಿಲ್ಲ. ಅವರು ಕಾವೇರಿ ವಿಷಯದಲ್ಲಿ ವಾದ ಮಾಡುವುದಿಲ್ಲ ಎಂದರೆ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಶೆಟ್ಟರ್‌ ಹೇಳಿದರು.

Comments are closed.