ಕರ್ನಾಟಕ

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ; ತಮಿಳುನಾಡು ಸಚಿವರ ಆಪ್ತ ಕಾರ್ಯದರ್ಶಿ ಸೇರಿದಂತೆ 11 ಮಂದಿ ಬಂಧನ

Pinterest LinkedIn Tumblr

veshye

ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಶನಿವಾರ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ದಾಳಿ ನಡೆಸಿದ್ದು, ತಮಿಳುನಾಡು ಸಚಿವರೊಬ್ಬರ ಆಪ್ತ ಕಾರ್ಯದರ್ಶಿ ಸೇರಿ 11 ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ ಐವರು ಯುವತಿಯರನ್ನು ರಕ್ಷಿಸಿದ್ದಾರೆ.

ಬಾಣಸವಾಡಿಯ ಮೋರ್ ಮಾಲ್ ಬಳಿ ಇರುವ ಮನೆ ಮೇಲೆ ಇಂದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ತಮಿಳುನಾಡು ಸಚಿವ ಬಾಲಕೃಷ್ಣಾರೆಡ್ಡಿ ಅವರ ಆಪ್ತ ಕಾರ್ಯದರ್ಶಿ ಸತ್ಯ ಅಲಿಯಾಸ್ ಸತ್ಯನಾರಾಯಣ ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Comments are closed.