ಕರ್ನಾಟಕ

ಬೆಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಸಂಚಾರ ದಟ್ಟಣೆ

Pinterest LinkedIn Tumblr

5traficಬೆಂಗಳೂರು,ಅ.೧೩- ಸಾಲು ಸಾಲು ರಜೆ ಮುಗಿಸಿ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಮಂದಿ ನಗರಕ್ಕೆ ಹಿಂತಿರುಗಿದ್ದರಿಂದ ಇಂದು ಬೆಳಿಗ್ಗೆ ನಗರದ ಬಹುತೇಕ ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು.
ಮೈಸೂರು ರಸ್ತೆ, ತುಮಕೂರು ರಸ್ತೆ, ಹೊಸೂರು, ಕೆಆರ್ ಪುರಂ ಭಾಗದಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೆರಳಬೇಕಾದ ಸ್ಥಳಕ್ಕೆ ತೆರಳಲು ಗಂಟೆಗಟ್ಟಲೆ ಕಾಯಬೇಕಾಯಿತು.
ಖಾಸಗಿ ಬಸ್‌ಗಳು ಎಲ್ಲೆಂದರಲ್ಲಿ ನಿಲ್ಲಿಸುತ್ತಿರುವುದರಿಂದ ಸಂಚಾರ ಸಮಸ್ಯೆ ಮತ್ತಷ್ಟು ಹೆಚ್ಚಾಗಿದ್ದು ಸಂಚಾರ ಪೊಲೀಸರು ವಾಹನ ಸಂಚಾರ ಸುಗಮಗೊಳಿಸಲು ಪರದಾಡುವಂತಾಗಿತ್ತು.
ಈ ಮಧ್ಯ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಂಚಾರ ನಿಯಮ ಉಲ್ಲಂಘಿಸಿದ ೧೬೫ ಕ್ಕೂ ಪ್ರಕರಣಗಳನ್ನು ದಾಖಲಿಸಿ ೬೫ ಸಾವಿರ ದಂಡ ವಸೂಲಿ ಮಾಡಿದ್ದಾರೆ.

Comments are closed.