ಕರ್ನಾಟಕ

ಸರ್ಜಿಕಲ್ ಸ್ಟ್ರೈಕ್ ದೊಡ್ಡ ಸಾಧನೆಯಲ್ಲ: ದೇವೇಗೌಡ

Pinterest LinkedIn Tumblr

devegougoudaಚಿಕ್ಕಮಗಳೂರು: ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಕ್ಕೆ ನುಗ್ಗಿ ಉಗ್ರರ ಶಿಬಿರಗಳ ಮೇಲೆ ನಡೆಸಿದ ಸೀಮಿತ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಅದು ದೊಡ್ಡ ಸಾಧನೆಯಲ್ಲ ಎಂದಿದ್ದಾರೆ.
ಇಂದು ಚಿಕ್ಕಮಗಳೂರಿನಲ್ಲಿ ಸೀಮಿತ ದಾಳಿಯ ಕುರಿತ ರಾಜಕೀಯ ಪಕ್ಷಗಳ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ, ಭಾರತೀಯ ಸೇನೆ ನಡೆಸಿದ ದಾಳಿ ಯುದ್ಧವಲ್ಲ. ಅಲ್ಲದೇ ಸರ್ಜಿಕಲ್ ಸ್ಟ್ರೈಕ್ ಮಹಾತ್ಸಾಧನೆಯಲ್ಲ ಎಂದರು.
ಯುದ್ಧ ಬೇರೆ, ಸೀಮಿತ ದಾಳಿಯೇ ಬೇರೆ. ಹಾಗಾಗಿ ಸೀಮಿತ ದಾಳಿಯ ವಿಷಯದಲ್ಲಿ ರಾಜಕೀಯವಾಗಿ ಲಾಭ ಪಡೆಯುವ ಹುನ್ನಾರ ಬೇಡ. 1965 ಮತ್ತು 1971ರಲ್ಲಿ ಭಾರತ ಪಾಕಿಸ್ತಾನದ ಮೇಲೆ ಯುದ್ಧ ನಡೆಸಿದೆ ಎಂದರು.
ಸೀಮಿತ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಕಿವಿ ಮಾತು ಹೇಳಿದ ದೇವೇಗೌಡರು, ನಮ್ಮ ಯೋಧರು ದೇಶ ರಕ್ಷಣೆಗಾಗಿ ದುಡಿಯುತ್ತಾರೆ. ಹಾಗಾಗಿ ಅವರ ಹೋರಾಟವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು

Comments are closed.