ಕರ್ನಾಟಕ

ರೈಲಿಗೆ ತಲೆಕೊಟ್ಟು ಪ್ರೇಮಿಗಳ ಆತ್ಮಹತ್ಯೆ

Pinterest LinkedIn Tumblr

trainಬೆಂಗಳೂರು: ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಹದೇವಪುರದಲ್ಲಿ ನಡೆದಿದೆ.

ರೇಖಾ ಮತ್ತು ಆಕೆಯ ಪ್ರಿಯಕರ ಸಾವನ್ನಪ್ಪಿದ ದುರ್ದೈವಿಗಳು. ಮಹದೇವಪುರ ಸಮೀಪದ ಕಾವೇರಿ ನಗರದ ರೈಲ್ವೆ ಹಳಿ ಬಳಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾವೇರಿನಗರದ ನಿವಾಸಿ ರೇಖಾಳ ಪ್ರಿಯಕರ ಈ ಹಿಂದೆ ರೇಖಾ ತಂದೆ ಬಳಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಇಬ್ಬರ ನಡುವೆ ಪ್ರೇಮವಾಗಿತ್ತು. ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಇತ್ತೀಚಿಗೆ ರೇಖಾಗೆ ಬೇರೊಬ್ಬನ ಜೊತೆ ಮದುವೆ ಮಾತುಕತೆಯಾಗಿತ್ತು. ಆದರೆ ರೇಖಾಗೆ ಮದುವೆ ಇಷ್ಟವಿರಲಿಲ್ಲ. ಇದರಿಂದ ಮನನೊಂದು ಇಬ್ಬರು ಮಹದೇವಪುರ ಸಮೀಪದ ಕಾವೇರಿ ನಗರದ ರೈಲ್ವೆ ಹಳಿ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಮಹದೇವಪುರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

Comments are closed.