ಕರ್ನಾಟಕ

ನಿಗಮ-ಮಂಡಳಿ ಅಧ್ಯಕ್ಷ ಸ್ಥಾನವನ್ನು ಗಿಟ್ಟಿಸಲು ರಾಹುಲ್‌ ಗಾಂಧಿ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿದ ಕಾಂಗ್ರೆಸ್ ಕಾರ್ಯಕರ್ತ

Pinterest LinkedIn Tumblr

rahulgandhiserious

ಬೆಂಗಳೂರು: ನಿಗಮ-ಮಂಡಳಿ ಅಧ್ಯಕ್ಷ ಸ್ಥಾನವನ್ನು ಗಿಟ್ಟಿಸಲು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ರಾಹುಲ್ ಗಾಂಧಿ ಹೆಸರಿನಲ್ಲೇ ನಕಲಿ ಶಿಫಾರಸು ಪತ್ರವೊಂದನ್ನು ಸೃಷ್ಟಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ನಕಲಿ ಪತ್ರದಲ್ಲಿನ ಸಾರಾಂಶ ಹೀಗಿದೆ; ‘ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನಿವಾಸಿಯಾಗಿರುವ ಸಂತೋಷ ಪಾಟೀಲ ಅವರು ಬಹಳ ವರ್ಷಗಳಿಂದ ಪಕ್ಷದ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದಾರೆ. ಅದ್ದರಿಂದ ಇವರನ್ನು ಎನ್‌ಡಬ್ಲ್ಯುಕೆಆರ್‌ಟಿಸಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕು.

ಈ ಮೂಲಕ ಯುವ ನಾಯಕನ ಬೆಳವಣಿಗೆಗೆ ನೆರವಾಗಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರಿಗೆ ರಾಹುಲ್ ಗಾಂಧಿ ಸೂಚಿಸಿದಂತೆ ಪತ್ರವನ್ನು ಸೃಷ್ಟಿಸಲಾಗಿದೆ.

ಇಂತಹ ಯಾವುದೇ ಪತ್ರ ರಾಹುಲ್‌ ಗಾಂಧಿಯಿಂದ ಬಂದಿಲ್ಲ. ರಾಹುಲ್ ಲೆಟರ್‌ ಹೆಡ್‌ನಲ್ಲಿರುವ ಪತ್ರ ನಕಲಿ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ತಿಳಿಸಿದ್ದಾರೆ.

Comments are closed.