ಬೆಂಗಳೂರು: ರಿಂಗ್ ರಸ್ತೆ ಅಂಡರ್ ಪಾಸ್ ನಿರ್ಮಾಣಕ್ಕಾಗಿ ತಮ್ಮ ಮನೆಯನ್ನು ಭೂಸ್ವಾಧೀನ ಮಾಡಿಕೊಂಡು, ಅದಕ್ಕೆ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಮಹಿಳೆಯೊಬ್ಬರು ಬಿಡಿಎ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಮಹಾಲಕ್ಷ್ಮಿ ಲೇಔಟ್ ನಿವಾಸಿ ಮಂಗಳಾ ಎಂಬವರು ಇಂದು ಬಿಡಿಎ ಕಚೇರಿಯಲ್ಲಿ ಭೂಸ್ವಾಧೀನ ಅಧಿಕಾರಿಯವರ ಚೇಂಬರ್ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಪರಿಹಾರ ನೀಡುವಂತೆ ಒತ್ತಾಯಿಸಿ ಬಿಡಿಎ ಕಚೇರಿ ಅಲೆಯುತ್ತಿದ್ದ ಮಂಗಳಾ, ಬಿಡಿಎ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತು ಈ ನಿರ್ಧಾರ ತೆಗೆದುಕೊಂಡಿದ್ದರು.
ವಿಷ ಸೇವಿಸಿ ಅಸ್ವಸ್ಥರಾದ ಮಂಗಳಾ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ
Comments are closed.