ಕರ್ನಾಟಕ

ಕಾವೇರಿ ಅಚ್ಚುಕಟ್ಟು ಪ್ರದೇಶಗಳಿಗೆ ಕೆಆರ್ ಎಸ್ ನಿಂದ ನೀರು ಬಿಡಲು ಮುಖ್ಯಮಂತ್ರಿ ಆದೇಶ

Pinterest LinkedIn Tumblr

kaveriಮೈಸೂರು: ಕಾವೇರಿ ಅಚ್ಚುಕಟ್ಟು ಪ್ರದೇಶದ ಕೃಷಿ ಬೆಳೆಗಳಿಗೆ ಕಬಿನಿ ಮತ್ತು ಕೆಆರ್ ಎಸ್ ಜಲಾಶಯಗಳಿಂದ ನೀರು ಬಿಡುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ನಂಜನಗೂಡಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸೋಮವಾರದಿಂದ ಜಲಾಶಯಗಳಿಂದ ನೀರು ಬಿಡುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸರ್ಕಾರ ಕೃಷಿಗೆ ನೀರು ಬಿಡದಿದ್ದರೇ ಅಕ್ಟೋಬರ್ 27 ರಿಂದ ಕೆಆರ್ ಎಸ್ ಮತ್ತು ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರು ಪ್ರತಿಭಟನೆ ನಡೆಸುವ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ನೀರು ಬಿಡುಗಡೆಗೆ ಸೂಚಿಸಲಾಗಿದೆ.
ಸೋಮವಾರದಿಂದ ಬೆಳೆಗಳಿಗೆ ನೀರು ಬಿಟ್ಟರೇ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ, 82 ಅಡಿ ತಲುಪಲಿದೆ ಎಂದು ಸಚಿವ ಎಂ.ಕೃಷ್ಣಪ್ಪ ತಿಳಿಸಿದ್ದಾರೆ.

Comments are closed.