ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಆರಂಭಗೊಂಡಿದ್ದು, ನಗರದ ಹಲವೆಡೆ ಧಾರಕಾರ ಮಳೆ ಸುರಿಯುತ್ತಿದೆ.
ಯಶವಂತಪುರ, ಮಲ್ಲೇಶ್ವರಂ, ಮೆಜೆಸ್ಟಿಕ್, ವಿಜಯನಗರ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ. ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಟುತ್ತಿದ್ದಾರೆ. ಚಿಕ್ಕಾಬಳ್ಳಾಪುರ, ಮಡಿಕೇರಿಯಲ್ಲೂ ಭಾರೀ ಮಳೆಯಾಗುತ್ತಿದೆ.
ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಶ್ರೀನಿವಾಸ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, 10 ದಿನ ತಡವಾಗಿ ಹಿಂಗಾರು ಮಳೆ ಸೋಮವಾರ ರಾಜ್ಯವನ್ನು ಪ್ರವೇಶಿಸಿದೆ. ಹೀಗಾಗಿ ಇಂದು ಮಳೆಯಾಗಿದೆ. ಇನ್ನು ಎರಡು ಮೂರು ದಿನ ಕರಾವಳಿ, ದಕ್ಷಿಣ ಒಳನಾಡು, ಮಲೆನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ತಿಳಿಸಿದ್ದಾರೆ.
Comments are closed.