ಗದಗ(ನ.11): ಎಸ್.ಪಿ ಸಂತೋಷಬಾಬು ಸಮ್ಮುಖದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ಜಟಾಪಟಿ ನಡೆದಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ಬಳಿ ಈ ಘಟನೆ ನಡೆದಿದ್ದು ಇಂದು ಶಿಂಗಟಾಲೂರ ಏತನೀರಾವರಿ ಕಾಲುವೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಅವರ ಸ್ವಾಗತಕ್ಕಾಗಿ ಗದಗ ಗ್ರಾಮೀಣ ಸಿಪಿಐ ಸೋಮಶೇಖರ ಜುಟ್ಟಲ್ ಹಾಗೂ ಶಿರಹಟ್ಟಿ ಕ್ಷೇತ್ರದ ಶಾಸಕ ರಾಮಕೃಷ್ಣ ದೊಡ್ಡಮನಿ ಅಳಿಯಾ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಭದ್ರತೆಗಾಗಿ ಪೊಲೀಸ್ ಅಧಿಕಾರಿಗಳು ಸೇರಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಇವರ ನಡುವೆ ಮಾತಿನ ಚಕಮಕಿ ನಡೆದು ಒಬ್ಬರನ್ನೊಬ್ಬರು ತಳ್ಳಾಡಿಕೊಂಡಿದ್ದಾರೆ.
ಆದರೂ ಎಸ್ಪಿ ಸಂತೋಷ್ ಬಾಬು ತಮ್ಮ ಸಿಬ್ಬಂದಿಗೆ ತಿಳಿಹೇಳುವುದನ್ನು ಬಿಟ್ಟು ಶಾಸಕ ರಾಮಕೃಷ್ಣ ದೊಡ್ಡಮನಿ ಅವರ ಅಳಿಯನ ಮನವೊಲಿಸುವಲ್ಲಿ ಮುಂದಾದ ದೃಶ್ಯ ಕಂಡು ಬಂತು.
ಕರ್ನಾಟಕ
Comments are closed.