ಬೆಳಗಾವಿ: ಬೆಳಗಾವಿಯ ನನ್ನ ಪ್ರೀತಿಯ ಬಂಧು ಭಗಿನಿಯರೇ…ನಿಮಗೆಲ್ಲಾ ನನ್ನ ನಮಸ್ಕಾರಗಳು. ಕೆಎಲ್ಇ ಸಂಸ್ಥೆ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭಿಸಿದ್ದು ಹೀಗೆ.
ಉತ್ತಮ ಶಿಕ್ಷಕರು ಹಲವರಿರುತ್ತಾರೆ. ಆದರೆ ಅಮರ ಶಿಕ್ಷಕರು ಕೆಲವರು ಮಾತ್ರ ಇರುತ್ತಾರೆ. ಲೋಕಮಾನ್ಯ ತಿಲಕ್ ಹಾಗೂ ಕ್ರಾಂತಿಯೋಗಿ ಬಸವಣ್ಣ ಅವರ ಸ್ಫೂರ್ತಿಯಿಂದ ಕೆಎಲ್ಇ ಆರಂಭವಾಗಿದೆ. ಇಂದು ದೇಶದ ಮೂಲೆ ಮೂಲೆಯಲ್ಲಿಯೂ ಕೆಎಲ್ಇ ವಿದ್ಯಾರ್ಥಿಗಳಿದ್ದಾರೆ. ಯಾವುದೇ ಕೆಲಸದ ಸಂದರ್ಶನದಲ್ಲಿ ಭಾಗಿಯಾದರೂ ವಿದ್ಯಾರ್ಥಿಗಳು ಹೆಮ್ಮೆಯಿಂದ ಕೆಎಲ್ಇ ಬಗ್ಗೆ ಹೇಳಿಕೊಳ್ಳುತ್ತಾರೆ.
ಇದನ್ನೂ ಓದಿ
ಕಪ್ಪು ಹಣವನ್ನು ವಾಮಮಾರ್ಗದ ಮೂಲಕ ಸಕ್ರಮ ಮಾಡಲು ಮುಂದಾದರೆ ಕಠಿಣ ಕ್ರಮ
ದೇಶದ ಅಭಿವೃದ್ಧಿಗಾಗಿ ಕೆಎಲ್ಇ ಮತ್ತಷ್ಟು ಕೊಡುಗೆಯನ್ನು ನೀಡಬೇಕಿದೆ. ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವವರಿಗೆ ಕೆಎಲ್ಇ ಸಂಸ್ಥೆ ಸ್ಫೂರ್ತಿಯಾಗಿದೆ ಎಂದು ಮೋದಿ ಶ್ಲಾಘಿಸಿದ್ದಾರೆ.
Comments are closed.