ಕರ್ನಾಟಕ

ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ; 30 ಪ್ರಯಾಣಿಕರ ಜೀವ ರಕ್ಷಣೆ

Pinterest LinkedIn Tumblr

ksr

ರಾಮನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ಟಿಸಿ) ಬಸ್ ಚಾಲಕನ ಸಮಯಪ್ರಜ್ಞೆಯಿಂದ 30 ಮಂದಿ ಜೀವ ಉಳಿದಿದೆ.

ರಾಮನಗರ ಜಿಲ್ಲೆಯ ಕನಕಪುರದಿಂದ ತಮಿಳುನಾಡಿನ ಜವಳಿಗಿರಿ ಕಡೆಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಈ ವೇಳೆ ಬಸ್ ನಲ್ಲಿ ಸಣ್ಣ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಜಾಗೃತನಾದ ಬಸ್ ಚಾಲಕ ರಸ್ತೆ ಬದಿಗೆ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ.

ಕ್ಷಣಾರ್ಧದಲ್ಲೇ ಬಸ್ ಧಗಧಗನೇ ಉರಿಯಲಾರಂಭಿಸಿದೆ. ನೋಡು ನೋಡುತ್ತಿದ್ದಂತೆ ಬಸ್ ಸುಟ್ಟು ಕರಕಲಾಗಿದೆ. ಬಸ್ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

Comments are closed.