ಕರ್ನಾಟಕ

ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮೋದಿಯನ್ನು ಹೊಗಳಿದ ಬಡ ಮಹಿಳೆಯರು

Pinterest LinkedIn Tumblr

modhiಬೆಳಗಾವಿ: ನೋಟ್ ಬ್ಯಾನ್ ಮಾಡಿದ್ದಕ್ಕೆ ಮೋದಿ ವಿರುದ್ಧ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಮೋದಿಯನ್ನೇ ಪ್ರತಿಭಟನಾಕಾರರು ಹೊಗಳಿ, ಕಾಂಗ್ರೆಸ್ ತೆಗಳಿದ ಪ್ರಸಂಗ ಬೆಳಗಾವಿಯಲ್ಲಿ ನಡೆದಿದೆ.

ನಗರದ ಚೆನ್ನಮ್ಮ ವೃತ್ತದಲ್ಲಿ ಇಂದು ನೋಟ್ ನಿಷೇಧಿಸಿರುವ ಕೇಂದ್ರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬಾಳ್ಕರ್ ನೇತೃತ್ವದಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು ಮೋದಿ ಫೋಟೋವನ್ನು ಸುಟ್ಟು ಹಾಕಿದ್ದರು. ಬಡ ಮಹಿಳೆಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಮಹಿಳೆಯರು, ಮೋದಿ 30 ಸಾವಿರ ರೂ. ಕಳುಹಿಸಿದ್ದಾರೆ ಎಂದು ಹೇಳಿ ನಮ್ಮನ್ನು ಕರೆದುಕೊಂಡು ಬಂದಿದ್ದಾರೆ. ನಮಗೆ ಇಲ್ಲಿ ಏನು ನಡೆಯುತ್ತಿದೆ ಎನ್ನುವುದೇ ಗೊತ್ತಿಲ್ಲ. ನಾವು ಓದಿಲ್ಲ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ 100, 200 ರೂ. ಕಾಂಗ್ರೆಸ್ ನೀಡಿದೆ. ನಮಗೆ ಈ ದುಡ್ಡು ಬೇಡ. ಬೇಕಾದ್ರೆ ನಾವೇ ಅವರಿಗೆ ದುಡ್ಡು ಕೊಡುತ್ತೇವೆ. ನೋಟ್ ಬ್ಯಾನ್ ಮಾಡುವ ಮೂಲಕ ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳುವ ಮೂಲಕ ಅವರು ಮೋದಿಯನ್ನು ಹೊಗಳಿದರು.

Comments are closed.