ಕರ್ನಾಟಕ

ಮೋದಿ ಸಂಸತ್ತಿನ ಹೊರಗಡೆ ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ: ಖರ್ಗೆ

Pinterest LinkedIn Tumblr

khargeಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾತನಾಡುವುದು ಬಿಟ್ಟು ಸಂಸತ್ತಿನ ಹೊರಗಡೆ ಸುಳ್ಳು ಆರೋಪಗಳನ್ನು ಮಾಡುತ್ತಾ ತಿರುಗುತ್ತಿದ್ದಾರೆ. ಅವರು ಸುಳ್ಳು ಹೇಳುವುದನ್ನು ಕಲಿತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಮೋದಿ, ಸಂಸದರಾಗಿ ಆಯ್ಕೆಯಾದ ನಂತರ ಪ್ರಧಾನಿಯಾಗಿದ್ದಾರೆ. ಆದ್ದರಿಂದ ಅವರು ತೆಗೆದುಕೊಂಡ ನಿರ್ಧಾರಗಳ ಕುರಿತಂತೆ ಸಂಸತ್ತಿಗೆ ಮಾಹಿತಿ ನೀಡಬೇಕೇ ಹೊರತು ಸಂಸತ್ತಿನ ಹೊರಗಲ್ಲ ಎಂದು ತಿರುಗೇಟು ನೀಡಿದ್ದಾರೆ.

ಪ್ರಧಾನಿ ಮೋದಿ ನೋಟು ನಿಷೇಧ ಕುರಿತಂತೆ ತಮ್ಮ ಪಕ್ಷದ ಸದಸ್ಯರಿಗೆ ಆರಂಭದಲ್ಲಿಯೇ ಮಾಹಿತಿ ನೀಡಿರುವುದು ಬಹಿರಂಗವಾಗಿದೆ. ಒಂದು ವೇಳೆ ತಪ್ಪು ಮಾಡಿರದಿದ್ದಲ್ಲಿ ಸಂಸತ್ತಿಗೆ ಬಂದ ಮಾತನಾಡಲು ಯಾಕೆ ಹೆದರುತ್ತಿದ್ದಾರೆ ಎಂದು ಪ್ರಶ್ನಿಸಿದರು.

ನೋಟು ನಿಷೇಧ ಜಾರಿಗೊಳಿಸಿರುವುದರ ಬಗ್ಗೆ ನಮಗೆ ಅಭ್ಯಂತರವಿಲ್ಲ. ಆದರೆ, ಪೂರ್ವಾಲೋಚನೆಯಿಲ್ಲದೆ ತೆಗೆದುಕೊಂಡ ನಿರ್ಧಾರದಿಂದ ದೇಶದ ಜನತೆ ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಕಿಡಿಕಾರಿದ್ದಾರೆ.

Comments are closed.