ಬೆಂಗಳೂರು(ನ.30): ಕೇಂದ್ರ ಸಚಿವ ಸದಾನಂದಗೌಡರ ಪುತ್ರ ಕಾರ್ತಿಕ್ ಗೌಡ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಸಂಧಾನಕ್ಕೆ ಕಾರ್ತಿಕ್ ಗೌಡ ನಿರಾಕರಿಸಿದ್ದಾರೆ.
ಕಾರ್ತಿಕ್ ವಿರುದ್ಧ ನಟಿ ಮೈತ್ರಿಯಾ ಗೌಡ ದೂರು ನೀಡಿದ್ದರು. ಪ್ರಕರಣ ರದ್ದು ಕೋರಿ ಕಾರ್ತೀಕ್ ಅರ್ಜಿ ಸಲ್ಲಿಸಿದ್ದರು. ಕಳೆದ ವಿಚಾರಣೆ ವೇಳೆ ಸಂಧಾನಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಆದರೆ, ರಾಜಿ ಸಂಧಾನಕ್ಕೆ ಒಪ್ಪಿಕೊಳ್ಳದ ಕಾರ್ತಿಕ್ ಗೌಡ ವಕೀಲರಿಂದ ಕೋರ್ಟ್ಗೆ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ, ಹೈಕೋರ್ಟ್ ಡಿಸೆಂಬರ್ 5ಕ್ಕೆ ವಿಚಾರಣೆ ಮುಂದೂಡಿದೆ.
ಕರ್ನಾಟಕ
Comments are closed.