ಕರ್ನಾಟಕ

ನಾನು ಅಮಾಯಕ: ಹೆಚ್.ವೈ.ಮೇಟಿ

Pinterest LinkedIn Tumblr

meti-vijayalakshmiಬೆಂಗಳೂರು(ಡಿ. 14): ಮಾಧ್ಯಮಗಳಲ್ಲಿ ತಮ್ಮ ರಾಸಲೀಲೆ ವಿಡಿಯೋ ಬಹಿರಂಗವಾದರೂ ಅಬಕಾರಿ ಸಚಿವ ಹೆಚ್.ವೈ.ಮೇಟಿ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. “ಮಾಧ್ಯಮಗಳಲ್ಲಿ ಬಹಿರಂಗವಾಗಿದೆಯಷ್ಟೇ. ಅದರಲ್ಲಿ ಸತ್ಯಾಂಶವಿಲ್ಲ. ಸಿಎಂಗೆ ಮುಜುಗರವಾಗಬಾರದು ಎಂಬ ನಿಟ್ಟಿನಲ್ಲಿ ನಾನು ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ,” ಎಂದು ಮಾಧ್ಯಮಗಳೆದುರು ಹೆಚ್.ವೈ.ಮೇಟಿ ಪ್ರತಿಕ್ರಿಯಿಸಿದ್ದಾರೆ.
ಈ ಪ್ರಕರಣದಲ್ಲಿ ತನ್ನದೇನೂ ತಪ್ಪಿಲ್ಲ. ತನಿಖೆ ಎದುರಿಸಲು ಸಿದ್ಧನಿದ್ದೇನೆ ಎಂದೂ ಮೇಟಿ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳಲ್ಲಿ ಇಂದು ಮೇಟಿ ರಾಸಲೀಲೆ ವಿಡಿಯೋ ಬಹಿರಂಗವಾದ ಬಳಿಕ ಮೇಟಿಯವರು ಸಿಎಂ ಅವರನ್ನು ಖುದ್ದಾಗಿ ಭೇಟಿ ಮಾಡಿದ್ದರು. ಈ ವೇಳೆ, ಮುಖ್ಯಮಂತ್ರಿಗಳು ಕ್ರುದ್ಧಗೊಂಡು ಮೇಟಿಯವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಿಜೆಪಿ ವಿರುದ್ಧ ಮಾತನಾಡು ನೈತಿಕತೆ ಇಲ್ಲದಂತೆ ಮಾಡಿದ್ದೀರಿ ಎಂದು ಸಿಎಂ ಈ ಸಂದರ್ಭದಲ್ಲಿ ಹೇಳಿರುವುದು ವರದಿಯಾಗಿದೆ.

Comments are closed.