ಬೆಂಗಳೂರು: ಎಲ್. ಭೀಮಾ ನಾಯ್ಕ್ ಸೇರಿದಂತೆ ಐದು ಮಂದಿ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಎಸಿಬಿ ತಂಡಗಳು ಶುಕ್ರವಾರ ದಾಳಿ ನಡೆಸಿವೆ.
ಭೀಮಾ ನಾಯ್ಕ್ ಅವರಿಗೆ ಸೇರಿದ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸ ಹಾಗೂ ಬಳ್ಳಾರಿ ಜಿಲ್ಲೆಯ ಮರಿಯಮ್ಮನ ತಾಂಡಾದಲ್ಲಿರುವ ಮನೆ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯನಿರ್ವಾಹಕ ಎಂಜಿನಿಯರ್ ಟಿ.ಆರ್. ಶಿವರಾಮು, ಕಲಬುರ್ಗಿ ಜಿಲ್ಲಾ ಪಂಚಾಯ್ತಿಯ ಸಹಾಯಕ ಎಂಜಿನಿಯರ್ ಶಿವಲಿಂಗಪ್ಪ, ತುಮಕೂರು ಜಿಲ್ಲೆ ಕೊರಟಗೆರೆ ವಲಯದ ಅರಣ್ಯಾಧಿಕಾರಿ ಡಿ. ನರಸಿಂಹಮೂರ್ತಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಪಶುವೈದ್ಯಾಧಿಕಾರಿ ಎಚ್.ಎಂ. ಶಿವಪ್ರಸಾದ್ ಅವರ ಮನೆಗಳ ಮೇಲೆ ಹಾಗೂ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆದಿದೆ.
Comments are closed.