ಕರ್ನಾಟಕ

ಲೈಂಗಿಕ ದೌರ್ಜನ್ಯ ಪ್ರಕರಣ: ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಬಂಧನ

Pinterest LinkedIn Tumblr

arrest

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಅಡಿಯಲ್ಲಿ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್’ನನ್ನು ಆರ್ ಆರ್ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಿನ್ನೆ ತಮಿಳುನಾಡಿನ ಪಾಂಡಿಚೇರಿ ಬಳಿ ಆರ್ಯವರ್ಧನ್ ನನ್ನು ಅರೆಸ್ಟ್ ಮಾಡಲಾಗಿದೆ.

ನಿನ್ನೆ ತಮಿಳುನಾಡಿನ ಪಾಂಡಿಚೇರಿ ಬಳಿ ದೇವಸ್ಥಾನಕ್ಕೆ ತೆರಳಿ ಹಿಂತಿರುಗುವ ವೇಳೆ ಅರೆಸ್ಟ್ ಮಾಡಲಾಗಿದೆ.. ಇನ್ನು ಇದೇ ತಿಂಗಳ 11ನೇ ತಾರಿಖಿನಂದು ಆಂಧ್ರ ಮೂಲದ ಸಂತ್ರಸ್ಥ ಮಹಿಳೆಯೊಬ್ಬರು ಆರ್ ಆರ್ ನಗರದಲ್ಲಿರುವ ಆರ್ಯವರ್ಧನ್ ಮನೆಗೆ ಸಂಖ್ಯಾಶಾಸ್ತ್ರ ಕೇಳಲು ತೆರಳಿದ್ದರು. ಈ ವೇಳೆ ಆರ್ಯವರ್ಧನ್ ಆಕೆಯ ಮೇಲೆ ಮುಗಿಬಿದ್ದು ಅತ್ಯಾಚಾರಕ್ಕೆ ಯತ್ನಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ.

ಬಳಿಕ ಯಾರಿಗಾದರೂ ಈ ವಿಚಾರವನ್ನು ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದ. ಹೀಗಾಗಿ ಸಂತ್ರಸ್ಥ ಮಹಿಳೆ 12ನೇ ತಾರೀಖಿನಂದು ಆರ್ ಆರ್ ನಗರದಲ್ಲಿ ದೂರನ್ನು ದಾಖಲು ಮಾಡಿದ್ದಳು. ಇದೀಗ ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದು ವಿಚಾರಣೆ ಮುಂದುವರಿಸಿದ್ದಾರೆ.

Comments are closed.