ಕರ್ನಾಟಕ

‘ಅತ್ಯಾಚಾರ ಹೆಚ್ಚಳಕ್ಕೆ ಮಧ್ಯರಾತ್ರಿ ಹೆಣ್ಣಮಕ್ಕಳು ಸ್ವೇಚ್ಛಾಚಾರಿಗಳಂತೆ ಅಲೆದಾಡುವುದು ಕಾರಣ: ಮಾತೆ ಮಹಾದೇವಿ

Pinterest LinkedIn Tumblr


ಧಾರವಾಡ: ‘ರಾತ್ರಿ 12 ಗಂಟೆಯ ನಂತರ ಬೀದಿಯಲ್ಲಿ ಹೆಣ್ಣುಮಕ್ಕಳು ಕಾಮುಕರಿಗೆ ಪ್ರಚೋದನೆ ನೀಡುತ್ತ ಓಡಾಡುತ್ತಿರುವುದರಿಂದಲೇ ಅತ್ಯಾಚಾರಗಳು ಹೆಚ್ಚಾಗುತ್ತಿವೆ’ ಎಂದು ಮಾತೆ ಮಹಾದೇವಿ ಹೇಳಿದರು.

ಧಾರವಾಡದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೆಣ್ಣುಮಕ್ಕಳು ಹೊಸ ವರ್ಷದ ಹೆಸರಿನಲ್ಲಿ ಈ ರೀತಿಯ ಸ್ವೇಚ್ಛಾಚಾರದ ವರ್ತನೆ ತೋರುವುದು ಅವಮಾನಕರ. ಇಂಥ ಪ್ರಕರಣಗಳು ನಿಲ್ಲಬೇಕಾದರೆ ಹೆಣ್ಣಮಕ್ಕಳು ಮೈ ತುಂಬಾ ಬಟ್ಟೆ ಧರಿಸಬೇಕು. ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ತರಬೇಕು. ಅತ್ಯಾಚಾರಗಳು ಹೆಚ್ಚಾಗುವಲ್ಲಿ ಅರ್ಧ ತಪ್ಪು ಹೆಣ್ಣು ಮಕ್ಕಳದು, ಇನ್ನರ್ಧ ತಪ್ಪು ಸಮಾಜದ್ದು’ ಎಂದರು.

‘ಸಿನಿಮಾ ಮತ್ತು ದೃಶ್ಯ ಮಾಧ್ಯಮಗಳೂ ಇದಕ್ಕೆಲ್ಲಾ ಕಾರಣ. ಇವುಗಳಿಗೆಲ್ಲ ಕಡಿವಾಣ ಹಾಕಬೇಕಿದೆ. ಅರಬ್ ದೇಶದಲ್ಲಿರುವಂಥ ಕಠಿಣ ಕಾನೂನು ಹಾಗೂ ಆ ದೇಶಗಳಲ್ಲಿರುವ ವಸ್ತ್ರಸಂಹಿತೆ ನಮ್ಮಲ್ಲಿಯೂ ಜಾರಿಗೆ ಬರಬೇಕು’ ಎಂದು ಹೇಳಿದರು.

Comments are closed.