ಕರ್ನಾಟಕ

6 ತಿಂಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ಅವಘಡ: ಕೋಡಿ ಮಠದ ಸ್ವಾಮೀಜಿ

Pinterest LinkedIn Tumblr


ಬೆಳಗಾವಿ: ಇನ್ನು ಆರು ತಿಂಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಅವಘಡ ಸಂಭವಿಸುವ ಲಕ್ಷಣವಿದೆ ಎಂದು ಕೋಡಿ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ರಾಜ್. ಸರಕಾರಕ್ಕೆ ಯಾವುದೇ ಅಪಾಯವಿಲ್ಲ. ಆದರೆ, ಇನ್ನೂ ಆರು ತಿಂಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರದಲ್ಲಿ ಅವಘಡ ಸಂಭವಿಸುವ ಸಾಧ್ಯತೆಗಳಿವೆ ಎಂದರು.

ಕೇಂದ್ರ ಸರಕಾರದ ನೋಟು ನಿಷೇಧ ನಿರ್ಧಾರದಿಂದ ಶ್ರೀಮಂತರಿಗೆ ಸಿಡಿಲು ಬಡೆದಂತಾಗಿತ್ತು. ಡಾಲರ್ ಬ್ಯಾನ್ ಆದರೆ ಇಡೀ ಜಗತ್ತೆ ಮುಳುಗುತ್ತದೆ. ನಾನು ಭವಿಷ್ಯ ಹೇಳಲ್ಲ, ಭವಿಷ್ಯ ನಿರೂಪಿಸುತ್ತೇನೆ ಎಂದು ತಿಳಿಸಿದರು.

ಕಪ್ಪತ್ತಗುಡ್ಡ ಕಾಪಾಡಲು ಸ್ವಾಮಿಗಳು ನಡೆಸುತ್ತಿರುವ ಹೋರಾಟಕ್ಕೆ ನನ್ನ ಬೆಂಬಲ ಇದೆ. ಒಳ್ಳೆಯ ಕೆಲಸಕ್ಕೆ ಎಲ್ಲರ ಬೆಂಬಲ ಇದ್ದೆ ಇರುತ್ತದೆ ಎಂದು ಕೋಡಿ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

Comments are closed.