ಕರ್ನಾಟಕ

ಬಿಜೆಪಿ ಶಾಸಕ ರಾಜು ಕಾಗೆ  ಜ.23ರವರೆಗೆ ನ್ಯಾಯಾಂಗ ಬಂಧನ

Pinterest LinkedIn Tumblr


ಬೆಳಗಾವಿ(ಜ. 19): ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ರಾಜು ಕಾಗೆ ಸೇರಿದಂತೆ ಮೂವರಿಗೆ ನ್ಯಾಯಾಂಗ ಬಂಧನವಾಗಿದೆ. ರಾಜು ಕಾಗೆ, ಅವರ ಪುತ್ರಿ ತೃಪ್ತಿ, ಹಾಗೂ ಸೋದರನ ಪತ್ನಿಯನ್ನು ಜನವರಿ 23ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಅಥಣಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದಲ್ಲಿ ಕಾಗವಾಡ ಪೊಲೀಸ್ ಠಾಣೆಯಲ್ಲಿ 13 ಮಂದಿ ವಿರುದ್ಧ ದೂರು ದಾಖಲಾಗಿದ್ದರೂ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿ ಇಂದು ಅಥಣಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

Comments are closed.