ಕರ್ನಾಟಕ

ಕೋಟ್ಯಂತರ ರೂಪಾಯಿ ವಂಚನೆ ಆರೋಪ: ದಂಪತಿ ಆತ್ಮಹತ್ಯೆ

Pinterest LinkedIn Tumblr

ತುಮಕೂರು: ಚೀಟಿ ವ್ಯವಹಾರದಲ್ಲಿ ನೂರಾರು ಜನರಿಗೆ ಸುಮಾರು 5 ಕೋಟಿ ರೂಪಾಯಿಗೂ ಹೆಚ್ಚು ಹಣ ವಂಚಿಸಿದ್ದ ದಂಪತಿ ಆತ್ಮಹತ್ಯೆಗೆ ಶರಣಾಗಿರೋ ಘಟನೆ ತುಮಕೂರಿನ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ.

ರವಿ ಹಾಗೂ ಪ್ರಭಾ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಪತಿ ರವಿ ನೇಣು ಬಿಗಿದುಕೊಂಡು ಸಾವಿಗೆ ಶರಣಾದ್ರೆ, ಪತ್ನಿ ಪ್ರಭಾ ವಿಷ ಕುಡಿದು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರವಿ ಹಾಗೂ ಪ್ರಭಾ ಜನರ ಚೀಟಿ ಹಣದಿಂದ ಬಂಗಲೆ ಕಟ್ಟಿಕೊಂಡು, ಕಾರು ಖರೀದಿಸಿ ಐಷಾರಾಮಿ ಜೀವನ ನಡೆಸುತ್ತಿದ್ದರು. ಆದ್ರೆ ಚೀಟಿ ಹಣ ವಾಪಸ್ ನೀಡದಿದ್ದಾಗ ದಂಪತಿ ವಿರುದ್ಧ ಮೋಸ ಹೋದವರು ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಈ ದಂಪತಿ ಕೆಲದಿನ ಜೈಲಿನಲ್ಲಿ ಇದ್ದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಇದೀಗ ವಂಚಿಸಿದ ಹಣ ವಾಪಸ್ ಮಾಡಲಾಗದೆ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ಈ ಕುರಿತು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.