ಕರ್ನಾಟಕ

ರಾತ್ರಿ ಆಸ್ಪತ್ರೆಗೆ ದಾಖಲಾಗಿ ಬೆಳಗ್ಗೆ ಡಿಸ್ಚಾರ್ಜ್‌ ಆದ ಬಿಎಸ್‌ವೈ

Pinterest LinkedIn Tumblr


ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ರಾತ್ರಿ ನಗರದ ಸಾಗರ್‌ ಆಪಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುರುವಾರ ಬೆಳಗ್ಗೆ ಡಿಸ್ಚಾರ್ಜ್‌ ಆಗಿ ಮನೆಗೆ ಮರಳಿದ್ದಾರೆ.

ತೀವ್ರ ಜ್ವರ ಮತ್ತು ರಕ್ತದದ ಒತ್ತಡದಿಂದ ಬಳಲುತ್ತಿದ್ದ ಅವರಿಗೆ ರಾತ್ರಿ ವೈದ್ಯ ಡಾ.ಪ್ರಮೋದ್‌ ಅವರು ತುರ್ತು ಚಿಕಿತ್ಸೆ ನೀಡಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಒಂದು ದಿನ ವಿಶ್ರಾಂತಿ ಪಡೆಯಲು ಸೂಚಿಸಿ ಡಿಸ್ಚಾರ್ಜ್‌ ಮಾಡಲಾಗಿದೆ.

ಇಂದು ಮತ್ತು ನಾಳೆ ಎಲ್ಲಾ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ಬಿಎಸ್‌ವೈ ಅವರು ರದ್ದು ಮಾಡಿರುವ ಬಗ್ಗೆ ವರದಿಯಾಗಿದ್ದು, ಡಾಲರ್ಸ್‌ ಕಾಲೋನಿಯ ನಿವಾಸದಲ್ಲೇ ವಿಶ್ರಾಂತಿ ಜೊತೆಗೆ ದೀಪಾವಳಿ ಆಚರಿಸಲಿದ್ದಾರೆ.

-ಉದಯವಾಣಿ

Comments are closed.