ಕರ್ನಾಟಕ

ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ನಡೆದ ಕೆಪಿಸಿಎಲ್ ಕಲ್ಲಿದ್ದಲು ಗಣಿಗಾರಿಕೆ ಅಕ್ರಮ: ದಾಖಲೆ ಬಿಡುಗಡೆ ಮಾಡಿದ ಬಿಎಸ್‌ವೈ

Pinterest LinkedIn Tumblr

ಬೆಂಗಳೂರು: ಭಾರತೀಯ ಜನತಾಪಕ್ಷ(ಬಿಜೆಪಿ) ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕೆಪಿಸಿಎಲ್ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರವಧಿಯಲ್ಲಿ ಕೆಪಿಸಿಎಲ್ ನಲ್ಲಿ ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶಗಳಿಗೆ ವಿರುದ್ಧವಾಗಿ 418 ಕೋಟಿ ರುಪಾಯಿ ಅವ್ಯವಹಾರ ನಡೆದಿದೆ ಎಂದು ಯಡಿಯೂರಪ್ಪನವರೂ ಆರೋಪಿಸಿದ್ದಾರೆ.

ಕೆಪಿಸಿಎಲ್ ನ ಅಧ್ಯಕ್ಷರಾಗಿ ಸಿದ್ದರಾಮಯ್ಯನವರು ಇದರಲ್ಲಿ ನೇರ ಭಾಗಿಯಾಗಿದ್ದಾರೆ. 11 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರು ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಆದೇಶದ ವಿರುದ್ಧ ನಡೆದುಕೊಂಡು ಸುಮಾರು 418 ಕೋಟಿ ಹಗಲು ದರೋಡೆ ಮಾಡಿದ್ದಾರೆ ಎಂದು ಬಿಎಸ್ವೈ ಆರೋಪಿಸಿದ್ದಾರೆ.

ಕೆಪಿಸಿಎಲ್ ಮತ್ತು ಕೆಎಂಸಿಎಲ್ ನಡುವೆ ಒಪ್ಪಂದ ಹಲವು ಅನುಮಾನಗಳು ಬರುವಂತೆ ಮಾಡಿದೆ. ಇದೊಂದು ಸದ್ದುದ್ದೇಶದ ಒಪ್ಪಂದ ಆಗಿಲ್ಲ ಅನ್ನೋದು ಮೇಲ್ನೋಟಕ್ಕೆ ಕಾಣಿಸುತ್ತದೆ. ಕೆಪಿಸಿಎಲ್ ಸಹಭಾಗಿತ್ವದಲ್ಲಿ 2003ರ ಫೆಬ್ರವರಿಯಲ್ಲಿ ಜಂಟಿ ಕಂಪನಿ ಸ್ಥಾಪನೆಯಾಗಿದ್ದು, ಕೆಪಿಸಿಎಲ್ ಜವಾಬ್ದಾರಿ ಶೇಖಡ 24ರಷ್ಟು ಮಾತ್ರ ಇತ್ತು. ಇದಕ್ಕೆ ಸುಪ್ರೀಂಕೋರ್ಟ್ ಸಹ ದಂಡ ಹಾಕಿತ್ತು. ಮನೋಹರ್ ಲಾಲ್ ಶರ್ಮಾ ಕೇಸ್ ನಲ್ಲಿ ಹಲವು ಕಲ್ಲಿದ್ದಲು ಹಂಚಿಕೆಯನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಕೆಪಿಸಿಎಲ್ ಲೈಸೆನ್ಸ್ ಸಹ ರದ್ದಾಗಿತ್ತು ಎಂದು ಬಿಎಸ್ವೈ ಹೇಳಿದ್ದಾರೆ.

Comments are closed.