ಕರ್ನಾಟಕ

ಛಾಪಾ ಕಾಗದ ಹಗರಣದ ಅಪರಾಧಿ ಅಬ್ದುಲ್ ಕರೀಂ ಲಾಲ್ ತೆಲಗಿ ನಿಧನ

Pinterest LinkedIn Tumblr

ಬೆಂಗಳೂರು: ಬಹುಅಂಗಾಂಗ ವೈಫಲ್ಯದಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಛಾಪಾ ಕಾಗದ ಹಗರಣದ ಪ್ರಮುಖ ಅಪರಾಧಿ ಅಬ್ದುಲ್ ಕರೀಂ ಲಾಲ್ ತೆಲಗಿ (66) ಗುರುವಾರ ಮೃತಪಟ್ಟಿದ್ದಾನೆ.

ಅ.16ರಂದು ಅನಾರೋಗ್ಯಕ್ಕೀಡಾದ ತೆಲಗಿ ಆಸ್ಪತ್ರೆಗೆ ದಾಖಲಾಗಿದ್ದ. ಆತನನ್ನು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಛಾಪಾ ಕಾಗದ ಹಗರಣ ಪ್ರಕರಣದಲ್ಲಿ 2006 ರಿಂದ ಜೈಲಿನಲ್ಲಿ ತೆಲಗಿ ಶಿಕ್ಷೆ ಅನುಭವಿಸುತ್ತಿದ್ದ. 30 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈಗ 11 ವರ್ಷ ಶಿಕ್ಷೆ ಪೂರ್ಣಗೊಂಡಿದೆ.

Comments are closed.