ಕರ್ನಾಟಕ

ಮಹಾಮಸ್ತಕಾಭಿಷೇಕ: 175 ಕೋಟಿ ಅನುದಾನ ಬಿಡುಗಡೆಗೆ ಒಪ್ಪಿಗೆ

Pinterest LinkedIn Tumblr


ಬೆಂಗಳೂರು: ಮುಂದಿನ ಫೆಬ್ರವರಿಯಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕಕ್ಕೆ 175 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ ಪತ್ರಿಕಾ ಗೋಷ್ಠಿಯಲ್ಲಿ ಪ್ರಕಟಿಸಿದರು.

ನವೆಂಬರ್ 4 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಶ್ರವಣಬೆಳಗೊಳದಲ್ಲಿ ನಡೆಯಲಿರುವ ಸಭೆಯಲ್ಲಿ ಅನುಷ್ಠಾನಗೊಳಿಸಬೇಕಾದ ಯೋಜನೆಗಳ ಕುರಿತು ಅಂತಿಮಗೊಳಿಸಲಾಗುವುದು ಎಂದು ಜಯಚಂದ್ರ ಹೇಳಿದ್ದಾರೆ.

Comments are closed.