ಕರ್ನಾಟಕ

2018ರಲ್ಲೂ ಕಾಂಗ್ರೆಸ್‌ ಅಧಿಕಾರಕ್ಕೆ ತರುವುದೇ ನನ್ನ ಗುರಿ: ಪರಮೇಶ್ವರ್‌

Pinterest LinkedIn Tumblr


ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಾ. ಜಿ. ಪರಮೇಶ್ವರ್‌ ಏಳು ವರ್ಷ ಪೂರೈಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ಹಲವು ನಾಯಕರು ಪರಮೇಶ್ವರ್‌ಗೆ ಶುಭಾಶಯ ಕೋರಿದರು.

ನಂತರ ಮಾತನಾಡಿದ ಪರಮೇಶ್ವರ್, ಏಳು ವರ್ಷ ಪೂರೈಸಲು ಸಹಕಾರಿಸಿದ ಎಲ್ಲ ಮುಖಂಡರಿಗೂ ಧನ್ಯವಾದಗಳು ಎಂದರು.

ದೆಹಲಿಯಿಂದ ಬಂದ ಎಲ್ಲ ಪ್ರಧಾನ ಕಾರ್ಯದರ್ಶಿಗಳು ನನಗೆ ಸಾಥ್ ಕೊಟ್ಟಿದ್ದಾರೆ. ನನ್ನ ನಂಬಿ ಜವಾಬ್ದಾರಿ ಕೊಟ್ಟ ಹೈಕಮಾಂಡ್ಗೆ ಋಣಿಯಾಗಿದ್ದೇನೆ ಎಂದು ತಿಳಿಸಿದರು.

ಕಷ್ಟದಲ್ಲಿದ್ದ ಪಕ್ಷವನ್ನ 2013 ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ತಂದಿದ್ದೇವೆ. 2018 ಕ್ಕೂ ಪಕ್ಷ ಅಧಿಕಾರಕ್ಕೆ ತರುವುದೇ ನನ್ನ 8ನೇ ವರ್ಷದ ಸಂಕಲ್ಪ ಎಂದು ಪರಮೇಶ್ವರ್‌ ತಿಳಿಸಿದರು.

ಬಿಜೆಪಿ ರೀತಿ ನಮಗೆ ಮಿಷನ್ ಬೇಕಿಲ್ಲ..ಅಧಿಕಾರಕ್ಕೆ ಬರುವುದೇ ನಮಗೆ ಮುಖ್ಯ. 2018ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಅದ್ರೆ ನಾನು ಎಲ್ಲಿ ನಿಲ್ಲಬೇಕು ಅನ್ನೋದನ್ನ ಹೈಕಮಾಂಡ್ ನಿರ್ಧಾರ ಮಾಡುತ್ತೆ ಪರಮೇಶ್ವರ್ ಸ್ಪಷ್ಟಪಡಿಸಿದರು.

Comments are closed.