ಕರ್ನಾಟಕ

ಎಟಿಎಂಗೆ ಹಣ ತುಂಬಿಸುತ್ತಿದ್ದ ವೇಳೆ 18 ಲಕ್ಷ ರೂ. ದರೋಡೆ!

Pinterest LinkedIn Tumblr


ಬೆಂಗಳೂರು: ಎಟಿಎಂಗೆ ಹಣ ತುಂಬಿಸುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿ ದರೋಡೆ ಮಾಡಿರು ಘಟನೆ ನಗರದ ಜಾಲಹಳ್ಳಿ ಕ್ರಾಸ್‌ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

ಜಾಲಹಳ್ಳಿ ಕ್ರಾಸ್‌ ಬಳಿಯ ಐಸಿಐಸಿಐ ಎಟಿಎಂಗೆ ಸೆಕ್ಯೂರ್​ವೆಲ್ ಏಜೆನ್ಸಿಯ ಸಿಬಂದಿ ಹಣ ತುಂಬಿಸುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ದರೋಡೆಕೋರರು ಸಿಬಂದಿ ಮೇಲೆ ದಾಳಿ ನಡೆಸಿದ್ದು, ಪ್ರತಿರೋಧ ಒಡ್ಡಿದ ಕಸ್ಟೋಡಿಯನ್‌ ಮೇಲೆಯೇ ಚಾಕುವಿನಿಂದ ಇರಿದು ಹಣವನ್ನು ದೋಚಿದ್ದಾರೆಂದು ತಿಳಿದು ಬಂದಿದೆ.

ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಸಾಗರ್‌ ಹಾಗೂ ಮೋಹನ್‌ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

18.5 ಲಕ್ಷ ರೂಪಾಯಿಯನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ. ವಾಹನದಲ್ಲಿ ಇನ್ನೂ 1,26,50,000 ರೂಪಾಯಿ ಹಣ ಇತ್ತು ಎನ್ನಲಾಗಿದೆ.

ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

-ಉದಯವಾಣಿ

Comments are closed.