ಕರ್ನಾಟಕ

ತುರುವೇಕೆರೆ ತಾಲ್ಲೂಕಿನ ಬಾಣಸಂದ್ರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ವಾಹನದ ಮೇಲೆ ಕಲ್ಲು ತೂರಾಟ

Pinterest LinkedIn Tumblr

ತುಮಕೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಬಾಣಸಂದ್ರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ವಾಹನದ ಮೇಲೆ ಮೇಲೆ ಶುಕ್ರವಾರ ಕಲ್ಲು ತೂರಲಾಗಿದೆ.

ಬಿಜೆಪಿ ಅತೃಪ್ತರು ಹಾಗೂ ಜೆಡಿಎಸ್ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಲೇಟಿನಿಂದ ಪರಿವರ್ತನಾ ಯಾತ್ರೆ ವಾಹನದ ಗಾಜು ಪುಡಿಯಾಗಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿದ್ದ ಕಾರು ಬಾಣಸಂದ್ರ ಬಳಿ ನಿಲ್ಲಿಸದಕ್ಕೆ ಆಕ್ರೋಶಗೊಂಡ ಪಕ್ಷದ ಕಾರ್ಯಕರ್ತರು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಉಚ್ಛಾಟಿತ ಮುಖಂಡ ಚೌಧರಿ ನಾಗೇಶ್ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

Comments are closed.