ಕರ್ನಾಟಕ

2 ದಿನದಲ್ಲಿ ಗುಂಡಿಕ್ಕಿ ಕೊಲ್ತೇವೆ; ಹೊರಟ್ಟಿಗೆ ಬೆದರಿಕೆ ಪತ್ರ

Pinterest LinkedIn Tumblr


ಹುಬ್ಬಳ್ಳಿ:ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಮುಂಚೂಣಿಯಲ್ಲಿರುವ ನಾಯಕ, ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅವರನ್ನು ಇನ್ನು ಎರಡು ದಿನಗಳಲ್ಲಿ ಗುಂಡಿಕ್ಕಿ ಕೊಲ್ಲುವುದಾಗಿ ಬೆದರಿಕೆ ಹಾಕಿ ಅನಾಮಧೇಯ ಪತ್ರ ಬಂದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಮುಂಬೈನಿಂದ ಹುಬ್ಬಳ್ಳಿಗೆ ಆಗಮಿಸಲಿರುವ 5 ಜನರ ಶಾರ್ಪ್ ಶೂಟರ್ಸ್ ತಂಡ, ಇನ್ನು ಎರಡು ದಿನಗಳಲ್ಲಿ ನಿಮ್ಮನ್ನು ಗುಂಡಿಕ್ಕಿ ಕೊಲ್ಲಲಿದ್ದಾರೆ ಎಂಬ ಬೆದರಿಕೆಯನ್ನು ಪತ್ರದಲ್ಲಿ ಬರೆಯಲಾಗಿದೆ ಎಂದು ವರದಿ ವಿವರಿಸಿದೆ. ಈ ಬಗ್ಗೆ ಬಸವರಾಜ ಹೊರಟ್ಟಿ ಅವರು ಡಿಸಿಪಿ ಮಲ್ಲಿಕಾರ್ಜುನ್ ನ್ಯಾಮಗೌಡಗೆ ಬೆದರಿಕೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳಿ ತಿಳಿಸಿದ್ದಾರೆ.

-ಉದಯವಾಣಿ

Comments are closed.