ಮಂಡ್ಯ: ಕೆಪಿಎಂಇ ಕಾಯ್ದೆ ತಿದ್ದುಪಡಿ ವಿರೋಧಿಸಿ ವೈದ್ಯರು ಮುಷ್ಕರ ನಡೆಸುತ್ತಿರುವ ಪರಿಣಾಮ ರಾಜ್ಯದ ಬಹುತೇಕ ಖಾಸಗಿ ಆಸ್ಪತ್ರೆಗಳು ಬಾಗಿಲು ಹಾಕಿದ ಪರಿಣಾಮ ರೋಗಿಗಳು ಪರದಾಡುವಂತಾಗಿದೆ.
ಆದರೆ ಮಂಡ್ಯದ ಐದು ರುಪಾಯಿ ವೈದ್ಯ ಎಂದು ಖ್ಯಾತಿಯ ಡಾ.ಶಂಕರೇಗೌಡ ಇದ್ಯಾವುದಕ್ಕೂ ಬೆಂಬಲ ನೀಡದೇ ನಾಲ್ಕು ದಿನಗಳಿಂದಲೂ ನಿರಂತರವಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಾ ಬಂದಿದ್ದಾರೆ.
ಚರ್ಮ, ಕುಷ್ಠ, ಲೈಂಗಿಕ ರೋಗ ತಜ್ಞರಾಗಿರುವ ಡಾ.ಶಂಕರೇಗೌಡ, ಪ್ರತಿನಿತ್ಯದಂತೆ ಬೆಳಗ್ಗೆ ಶಿವಳ್ಳಿಯಲ್ಲಿ ನಂತರ ಮಂಡ್ಯ ನಗರದ ಆರ್.ಪಿ ರಸ್ತೆಯಲ್ಲಿನ ಕ್ಲಿನಿಕ್ನಲ್ಲಿ ಚಿಕಿತ್ಸೆ ನೀಡುತ್ತಲೇ ಬಂದಿದ್ದಾರೆ. ನವೆಂಬರ್ 3ರಂದು ಖಾಸಗಿ ಆಸ್ಪತ್ರೆಗಳ ಮುಷ್ಕರಕ್ಕೆ ನೀಡಿದ್ದ ಕರೆಗೂ ಬೆಂಬಲ ನೀಡದೇ ಕರ್ತವ್ಯ ನಿರ್ವಹಿಸಿದ್ದರು.
ಇದೀಗ ಸಾರ್ವಜನಿಕರಂತೂ ಡಾ.ಶಂಕರೇಗೌಡ ಅವರ ಕಾಯಕವನ್ನು ಹಾಡಿ ಹೊಗಳುತ್ತಿದ್ದಾರೆ.
Comments are closed.