ಕರ್ನಾಟಕ

ಪತ್ರಕರ್ತ ರವಿ ಬೆಳಗೆರೆ, ಅನಿಲ್‌ ರಾಜ್‌ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ವಿಧಾನಸಭಾ ಸಚಿವಾಲಯದಿಂದ ಗೃಹ ಇಲಾಖೆಗೆ ಪತ್ರ

Pinterest LinkedIn Tumblr

ಬೆಳಗಾವಿ: ಪತ್ರಕರ್ತ ರವಿ ಬೆಳಗೆರೆ ಹಾಗೂ ಅನಿಲ್ ರಾಜ್ ಅವರನ್ನು ಬಂಧಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭಾ ಸಚಿವಾಲಯ ಗೃಹ ಇಲಾಖೆಗೆ ಪತ್ರ ಬರೆದಿದೆ.

‘ಈ ಇಬ್ಬರು ಪತ್ರಕರ್ತರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಗಳನ್ನು ಮಂಗಳವಾರ ತಿರಸ್ಕರಿಸಿದ ವಿಧಾನಸಭೆ, ಅವರಿಗೆ ಜೈಲು ಶಿಕ್ಷೆ ವಿಧಿಸಬೇಕು ಎಂಬ ಹಿಂದಿನ ನಿರ್ಣಯವನ್ನು ಎತ್ತಿ ಹಿಡಿದಿದೆ. ಸದನದ ನಿರ್ಣಯವನ್ನು ತಕ್ಷಣವೇ ಅನುಷ್ಠಾನ ಮಾಡುವಂತೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕ ಹಾಗೂ ಬೆಂಗಳೂರು ನಗರ ‍ಪೊಲೀಸ್ ಕಮಿಷನರ್‌ಗೆ ಪತ್ರ ಕಳುಹಿಸಲಾಗಿದೆ’ ಎಂದು ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ತಿಳಿಸಿದರು.

‘ಹಾಯ್‌ ಬೆಂಗಳೂರು’ ಪತ್ರಿಕೆಯ ಸಂಪಾದಕ ರವಿ ಬೆಳಗರೆ ಮತ್ತು ‘ಯಲಹಂಕ ವಾಯ್ಸ್‌’ ಪತ್ರಿಕೆಯ ಸಂಪಾದಕ ಅನಿಲ್‌ ರಾಜ್‌ ಅವರಿಗೆ ಹಕ್ಕು ಬಾಧ್ಯತಾ ಸಮಿತಿ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹10,000 ದಂಡ ವಿಧಿಸಿತ್ತು. ಇದನ್ನು ಮರು ಪರಿಶೀಲಿಸುವಂತೆ ಪತ್ರಕರ್ತರಿಬ್ಬರೂ ವಿಧಾನಸಭೆ ಅಧ್ಯಕ್ಷ ಕೆ.ಬಿ. ಕೋಳಿವಾಡ ಅವರಿಗೆ ಮನವಿ ಸಲ್ಲಿಸಿದ್ದರು.

Comments are closed.