ಕರ್ನಾಟಕ

ಬೀದಿ ನಾಯಿಗಳಿಗೆ ಮೈಕ್ರೋ ಚಿಪ್‌ ಅಳವಡಿಸಿ : ಮೇಯರ್‌ ಸಂಪತ್‌ರಾಜ್‌ ಆದೇಶ

Pinterest LinkedIn Tumblr


ಬೆಂಗಳೂರು: ಸಂತಾನಹರಣ ಶಸ್ತ್ರಚಿಕಿತ್ಸೆಗೊಳಗಾಗಿರುವ ಬೀದಿ ನಾಯಿಗಳಿಗೆ ಕಡ್ಡಾಯವಾಗಿ ಮೈಕ್ರೋ ಚಿಪ್‌ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ರಾಜರಾಜೇಶ್ವರಿನಗರ ವಲಯದಲ್ಲಿ ಮಂಗಳವಾರ ಪ್ರಗತಿ ಪರಿಶೀಲನೆ ನಡೆಸಿದ ಅವರು, ”ನಗರದಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರಗೊಂಡಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತವೆ. ನಾಯಿಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಏಕೆ ಕ್ರಮಗಳನ್ನು ಕೈಗೊಂಡಿಲ್ಲ,” ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇದಕ್ಕೆ ತಡಬಡಾಯಿಸಿದ ಅಧಿಕಾರಿಗಳು, ಧಿ”ಬೀದಿ ನಾಯಿಗಳನ್ನು ಸೆರೆ ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ’ಧಿ’ ಎಂದು ಸಮಜಾಯಿಷಿ ನೀಡಿದರು. ಇದರಿಂದ ಮತ್ತಷ್ಟು ಕೋಪಗೊಂಡ ಮೇಯರ್‌, ‘ಧಿ’ಶಸ್ತ್ರಚಿಕಿತ್ಸೆ ಮಾಡುತ್ತಿದ್ದರೂ, ಅದೇಗೆ ನಾಯಿಗಳ ಸಂಖ್ಯೆ ಹೆಚ್ಚುತ್ತಿದೆ’,ಧಿ’ ಎಂದು ಪ್ರಶ್ನಿಸಿದರು.

”ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಸೆರೆ ಹಿಡಿದ ಬೀದಿ ನಾಯಿಗಳನ್ನು, ಚಿಕಿತ್ಸೆ ಬಳಿಕ ಅದೇ ವಾರ್ಡ್‌ನಲ್ಲಿ ಬಿಡಬೇಕಿದೆ. ಆದರೆ, ಬೇರೆಡೆ ಕೊಂಡೊಯ್ದು ಬಿಡುತ್ತಿರುವ ಬಗ್ಗೆಯೂ ದೂರುಗಳಿವೆ. ಅಧಿಲ್ಲದೆ, ಯಾವ ನಾಯಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂಬುದು ಕೂಡ ಗೊತ್ತಾಗುವುದಿಲ್ಲ. ಆದ ಕಾರಣ, ಶಸ್ತ್ರಚಿಕಿತ್ಸೆ ಮಾಡಿದ ನಾಯಿಗಳಿಗೆ ಮೈಕ್ರೋ ಚಿಪ್‌ ಅಳವಡಿಸಬೇಕು. ಇದರಿಂದ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಪಟ್ಟ ನಾಯಿಗಳ ಸಂಖ್ಯೆ ಎಷ್ಟೆಂಬುದು ನಿಖರವಾಗಿ ತಿಳಿಯಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು,” ಎಂದು ತಾಕೀತು ಮಾಡಿದರು.

”ರಾಜರಾಜೇಶ್ವರಿನಗರದಲ್ಲಿನ 22 ಕೆರೆಗಳ ವಿಸ್ತೀರ್ಣ, ಅಭಿವೃದ್ಧಿಗಾಗಿ ವೆಚ್ಚ ಮಾಡಿದ ಮಾಹಿತಿಯನ್ನೊಳಗೊಂಡ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಕೆರೆಗಳಿಗೆ ವಲಸೆ ಬರುವ ಹಕ್ಕಿಗಳ ರಕ್ಷಣೆಗೆ ಕ್ರಮ ವಹಿಸಬೇಕು. ಸಾರ್ವಜನಿಕರ ವಾಯುವಿಹಾರಕ್ಕೆ ಕೆರೆಗಳ ಸುತ್ತಲೂ ಉತ್ತಮ ಪರಿಸರವನ್ನು ನಿರ್ಮಿಸಬೇಕು,” ಎಂದು ಸೂಚಿಸಿದರು.

”ಆಸ್ತಿ ತೆರಿಗೆ ವಸೂಲಿಗೆ ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡದಿರುವುದು ಕಂಡು ಬಂದಿದೆ. ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು,” ಎಂದು ನಿರ್ದೇಶಿಸಿದರು.

ಉಪಮೇಯರ್‌ ಪದ್ಮಾವತಿ ನರಸಿಂಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

Comments are closed.