ಕರ್ನಾಟಕ

ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ಧನ ಪುನಾರಂಭಕ್ಕೆ ಕ್ರಮ

Pinterest LinkedIn Tumblr


ವಿಧಾನಪರಿಷತ್ತು: “ಸರ್ಕಾರಿ ಶಾಲೆಯ ಹೆಣ್ಣು ಮಕ್ಕಳಿಗೆ 2 ರೂ. ಪ್ರೋತ್ಸಾಹ ಧನ ನೀಡುವ ಪ್ರಕ್ರಿಯೆಯ ಮೇಲ್ವಿಚಾರಣೆ ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ಪುನಾರಂಭಿಸಲಾಗುವುದು’ ಎಂದು ಸಚಿವ ತನ್ವೀರ್‌ ಸೇಠ್ ಹೇಳಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಶುಕ್ರವಾರ ಬಿಜೆಪಿಯ ತಾರಾ ಅನುರಾಧ ಪ್ರಶ್ನೆಗೆ ಉತ್ತರಿಸಿದ ಅವರು, “ತಾತ್ಕಾಲಿಕವಾಗಿ 2 ರೂ. ಪ್ರೋತ್ಸಾಹಧನ ಯೋಜನೆ ಸ್ಥಗಿತಗೊಳಿಸಲಾಗಿದೆ. ಸದ್ಯದಲ್ಲೇ ಹೊಸ ನಿಯಮಾವಳಿ ರೂಪಿಸಿ ಚಾಲನೆ ನೀಡಲಾಗುವುದು. ಸರ್ಕಾರ ನುಡಿದಂತೆ ನಡೆದುಕೊಳ್ಳಲಿದೆ’ ಎಂದು ಹೇಳಿದರು.

ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಹೆಣ್ಣು ಮಕ್ಕಳಿಗೆ 2 ರೂ. ನೀಡುವ ಜವಾಬ್ದಾರಿಯನ್ನು ಮುಖ್ಯ ಶಿಕ್ಷಕ, ಶಿಕ್ಷಕರಿಗೆ ವಹಿಸಲಾಗಿತ್ತು. ಅವರ ವರದಿಯಂತೆ ಹಣ ಬಿಡುಗಡೆಯಾಗುತ್ತದೆ. ಅನೇಕ ಪ್ರಕರಣದಲ್ಲಿ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಸರ್ಕಾರವೇ ಯೋಜನೆ ಘೋಷಿಸಿರುವುದರಿಂದ ಮುಂದುವರಿಸಬೇಕೆಂದು ಒತ್ತಾಯಿಸಿದರು.

-ಉದಯವಾಣಿ

Comments are closed.