ಕರ್ನಾಟಕ

ಸಿಎಂ ಸಿದ್ದರಾಮಯ್ಯ ಭದ್ರತೆಗಿದ್ದ DYSP ಹೃದಯಾಘಾತದಿಂದ ಸಾವು

Pinterest LinkedIn Tumblr


ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭದ್ರತೆಗೆ ನಿಯೋಜನೆ ಗೊಂಡಿದ್ದ ಡಿವೈಎಸ್‌ಪಿ ಶೇಖ್‌ ಹುಸೇನ್‌ ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಚಿಕ್ಕಮಗಳೂರು ಗುಪ್ತಚರ ಇಲಾಖೆಯ ಡಿವೈಎಸ್‌ಪಿ ಆಗಿದ್ದ ಶೇಖ್‌ ಅವರಿಗೆ ಬೆಳಗ್ಗೆ ಹೃದಯಾಘಾತವಾಗಿದ್ದು ಎನ್‌.ಆರ್‌.ಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ಎನ್‌.ಆರ್‌.ಪುರದಲ್ಲಿ ತಂಗಿ ಇಂದು ಬೆಳಗ್ಗೆ ಹುಬ್ಬಳ್ಳಿಗೆ ಹೆಲಿಕ್ಯಾಪ್ಟರ್‌ನಲ್ಲಿ ತೆರಳಿದ್ದರು. ಸಿಎಂಗೆ ಶೇಖ್‌ ಅವರು ಭದ್ರತೆ ನೀಡುವ ಜವಾಬ್‌ದಾರಿ ವಹಿಸಿಕೊಂಡಿದ್ದರು.

ಸಿಎಂ ಅವರು ಹೆಲಿಕ್ಯಾಪ್ಟರ್‌ ಹಾರಾಟವಾಗುತ್ತಿದ್ದಂತೆ ಶೇಖ್‌ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಕಡಿಮೆ ರಕ್ತದೊತ್ತಡ ಮತ್ತು ಮಧುಮೇಹ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

-ಉದಯವಾಣಿ

Comments are closed.