ಕರ್ನಾಟಕ

ಇಂದಿರಾ ಕ್ಯಾಂಟಿನ್‌ ನಂತರ ಈಗ ಇಂದಿರಾ ಕ್ಲಿನಿಕ್ ಆರಂಭ

Pinterest LinkedIn Tumblr


ಬೆಂಗಳೂರು: ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ವತಿಯಿಂದ ಇಂದಿರಾ ಟ್ರಾನ್ಸಿಟ್ ಕ್ಲಿನಿಕ್ ಆರಂಭಿಸಲಾಗಿದೆ.

ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ಸಚಿವ ರಾಮಲಿಂಗಾರೆಡ್ಡಿ, ಕೆಪಿಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಉದ್ಘಾಟನೆ ಮಾಡಿದರು.

ಬಿಎಂಟಿಸಿ ಸಿಬ್ಬಂದಿ ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಈಗ ಇಂದಿರಾ ಕ್ಲಿನಿಕ್‌ ಆರಂಭಿಸಿದೆ.

ಮೆಜೆಸ್ಟಿಕ್‌ ಬಸ್‌ ನಿಲ್ದಾಣ, ಯಶವಂತಪುರ ಬಸ್ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಎರಡು ಕ್ಲಿನ್‌ ಆರಂಭಿಸಲಾಗಿದೆ. ಎರಡೂ ಕ್ಲಿನಿಕ್‌ಗಳನ್ನು ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು, ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಇಂದಿರಾ ಕ್ಲಿನಿಕ್‌ ಆರಂಭಿಸಲಾಗಿದೆ ಎಂದರು.

ಮಹಿಳೆಯರು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಿಯಾಯತಿ ದರದಲ್ಲಿ ಇಂದಿರಾ ಸಾರಿಗೆ ಬಸ್‌ ಸೇವೆ ಆರಂಭಿಸಲಾಗುವುದು ಎಂದು ರೇವಣ್ಣ ತಿಳಿಸಿದರು.

Comments are closed.