ಕರ್ನಾಟಕ

ದತ್ತಮಾಲಾ ಅಭಿಯಾನ: ಚಿಕ್ಕಮಗಳೂರು ಉದ್ವಿಗ್ನ

Pinterest LinkedIn Tumblr


ಚಿಕ್ಕಮಗಳೂರು: ದತ್ತಮಾಲಾ ಅಭಿಯಾನ ವೇಳೆ ಕಲ್ಲು ತೂರಾಟ ನಡೆಸಿರುವ ವರದಿಗಳು ಬಂದಿವೆ.

ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಪರಿಸ್ಥಿತಿ ಕೈ ಮೀರಿರುವ ಹಿನ್ನೆಲೆಯಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ಅಣ್ಣಾಮಲೈ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

ನಗರದಲ್ಲಿ ಕೆಲವು ಕಿಡಿಗೇಡಿಗಳು ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಈ ಹಿನ್ನೆಲೆ ದತ್ತಪೀಠಯಿಂದ ನಗರಕ್ಕೆ ದೌಡಾಯಿಸಿದ ಎಸ್ಪಿ ಅಣ್ಣಾಮಲೈ ಪರಿಶೀಲನೆ ನಡೆಸಿದರು.

ಉಪ್ಪಳ್ಳಿ, ಮೌಂಟನ್ ವ್ಯೂ ಕಾಲೇಜು ಬಳಿ ಕಲ್ಲು ತೂರಾಟ ನಡೆದಿದ್ದು, ಚಿಕ್ಕಮಗಳೂರಿನಲ್ಲಿ ಪ್ರಕ್ಷುಬ್ಧ ಸ್ಥಿತಿ ಇದೆ.

ನಗರದಲ್ಲಿ ಅಘೋಷಿತ ಬಂದ್ ವಾತಾವರಣವಿದೆ.

Comments are closed.