ಚಿಕ್ಕಮಗಳೂರು: ದತ್ತಮಾಲಾ ಅಭಿಯಾನ ವೇಳೆ ಕಲ್ಲು ತೂರಾಟ ನಡೆಸಿರುವ ವರದಿಗಳು ಬಂದಿವೆ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಪರಿಸ್ಥಿತಿ ಕೈ ಮೀರಿರುವ ಹಿನ್ನೆಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.
ನಗರದಲ್ಲಿ ಕೆಲವು ಕಿಡಿಗೇಡಿಗಳು ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಈ ಹಿನ್ನೆಲೆ ದತ್ತಪೀಠಯಿಂದ ನಗರಕ್ಕೆ ದೌಡಾಯಿಸಿದ ಎಸ್ಪಿ ಅಣ್ಣಾಮಲೈ ಪರಿಶೀಲನೆ ನಡೆಸಿದರು.
ಉಪ್ಪಳ್ಳಿ, ಮೌಂಟನ್ ವ್ಯೂ ಕಾಲೇಜು ಬಳಿ ಕಲ್ಲು ತೂರಾಟ ನಡೆದಿದ್ದು, ಚಿಕ್ಕಮಗಳೂರಿನಲ್ಲಿ ಪ್ರಕ್ಷುಬ್ಧ ಸ್ಥಿತಿ ಇದೆ.
ನಗರದಲ್ಲಿ ಅಘೋಷಿತ ಬಂದ್ ವಾತಾವರಣವಿದೆ.
Comments are closed.