
ಬೆಂಗಳೂರು: ಸಹುದ್ಯೋಗಿಗೆ ಸುಪಾರಿ ನೀಡಿದ ಪಕ್ರರಣದಲ್ಲಿ ತಾತ್ಕಾಲಿಕ ರಿಲೀಫ್ ಪಡೆದಿದ್ದ ಪತ್ರಕರ್ತ ರವಿ ಬೆಳಗೆರೆಗೆ ಮತ್ತೊಂದಿ ಸಂಕಷ್ಟ ಎದುರಾಗಿದ್ದು, ಮಾನನಷ್ಟ ಮೊಕದ್ದಮೆಯೊಂದಕ್ಕೆ ಸಂಬಂದಿಸಿದಂತೆ ಬೆಳಗೆರೆ ಬಂಧನಕ್ಕೆ ವಾರಂಟ್ ಜಾರಿಯಾಗಿದೆ.
ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬೆಳಗೆರೆ ಮಧ್ಯಾಂತರ ಜಾಮೀನು ಪಡೆದುಕೊಂಡಿದ್ದರು, ಇದರ ಬೆನ್ನಲ್ಲೇ ಗುರುವಾರದಂದು ಮಾನಹಾನಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿ, ಡಿ,28ರೊಳಗೆ ಕೋರ್ಟ್ಗೆ ಹಾಜರುಪಡಿಸುವಂತೆ ಸಂಜಯನಗರ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ರವಿ ಬೆಳಗೆರೆ ಒರಟ ಚಿತ್ರ ನಾಯಕ ಪ್ರಶಾಂತ್ ವಿರುದ್ಧ ಅವಹೇಳನಕಾರಿ ಲೇಖನ ಪ್ರಕಟಿಸಿದ್ದರು, ಹೀಗಾಗಿ ಪ್ರಶಾಂತ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದರ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಬೆಳಗೆರೆಗೆ ವಾರಂಟ್ ಜಾರಿ ಮಾಡಿದೆ.
Comments are closed.