
ಮೈಸೂರು: ಕಾಲೇಜಿನ ಆಡಳಿತ ಮಂಡಳಿಯ ಕ್ರಮಗಳು ಹಾಗೂ ಪ್ರಾಂಶುಪಾಲರ ವರ್ತನೆ ಖಂಡಿಸಿ ವಿದ್ಯಾರ್ಥಿಗಳು ಅರೆ ಬೆತ್ತಲೆಯಾಗಿ ಕುಳಿತು ಪರೀಕ್ಷೆ ಬರೆದ ಘಟನೆ ಮೈಸೂರಿನ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ನಡೆದಿದೆ.
ಶುಕ್ರವಾರ ಕಾನೂನು ಶಾಸ್ತ್ರದ ನಾಲ್ಕನೇ ಸೆಮಿಸ್ಟರ್ ನ ಪರೀಕ್ಷೆ ನಡೆದಿದೆ. ಈ ಸಂದರ್ಭದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ, ಶರ್ಟ್ ತೆಗೆದು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ವಿನೂತನವಾಗಿ ಪ್ರತಿಭಟಿಸಿದ್ದಾರೆ.
ಪ್ರತಿಭಟನೆ ಯಾಕೆ?
ಕಾಲೇಜಿಗೆ ಬಾರದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ನೀಡಿರುವುದು, ಸರ್ಕಾರಿ ನೌಕರರಿಗೂ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿರುವುದು, ಹಣ ಪಡೆದು ಅನರ್ಹರಿಗೆ ಪರೀಕ್ಷೆಗೆ ಬರೆಯಲು ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ಅನುಮತಿ ನೀಡಿದ್ದಾರೆ. ಈ ಕ್ರಮವನ್ನು ಖಂಡಿಸಿ ಈ ರೀತಿಯಾಗಿ ಪ್ರತಿಭಟನೆ ನಡೆಸಿದ್ದೇವೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
5-6 ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಉಳಿದ ವಿದ್ಯಾರ್ಥಿಗಳು ಬೇರೆ ಕೊಠಡಿಯಲ್ಲಿ ಅರೆಬೆತ್ತಲೆಯಾಗಿ ಪರೀಕ್ಷೆ ಬರೆದಿದ್ದಾರೆ. ಬೇರೆ ವಿದ್ಯಾರ್ಥಿಗಳ ದೃಶ್ಯವನ್ನು ಚಿತ್ರಕರಣ ಮಾಡಲು ಕಾಲೇಜಿನ ಆಡಳಿತ ಮಂಡಳಿ ಅನುಮತಿ ನೀಡಿಲ್ಲ.
Comments are closed.