
ಹುಬ್ಬಳ್ಳಿ: ಬದುಕಿದ್ದ ಯುವಕನನ್ನು ಸುಮಾರು ಏಳು ಗಂಟೆಗಳ ಕಾಲ ಶವಾಗಾರದಲ್ಲಿಟ್ಟ ಘಟನೆ ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಇಲ್ಲಿನ ಆನಂದ್ ನಗರದ ನಿವಾಸಿ ಪ್ರವೀಣ್ ಮೂಳೆ(23) ಎಂಬ ಯುವಕ ಭಾನುವಾರ ಸಂಜೆ 7 ಗಂಟೆಯ ಹೊತ್ತಿಗೆ ನಡೆದ ಕಾರ್ ಅಪಘಾತವೊಂದರಲ್ಲಿ ಗಾಯ ಗೊಂಡಿದ್ದರು. ರಾತ್ರಿ 8 ಗಂಟೆಯ ವೇಳೆಗೆ ಸಂಬಧಿಕರು ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಪ್ರವೀಣ್ ಮರಣ ಹೊಂದಿದ್ದಾರೆಂದು ರಾತ್ರಿ 3 ಗಂಟೆಯ ವೇಳೆಗೆ ಅವರನ್ನು ಶವಾಗಾರಕ್ಕೆ ಸಾಗಿಸಲಾಗಿತ್ತು.
ಸೋಮವಾರ ಬೆಳಗ್ಗೆ 10 ಗಂಟೆಯ ವೇಳೆಗೆ ಮರಣೋತ್ತರ ಪರೀಕ್ಷೆ ಮಾಡಲು ವೈದ್ಯರು ತೆರಳಿದಾಗ ಪ್ರವೀಣ್ ಇನ್ನೂ ಬದುಕಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಕಿಮ್ಸ್ನಿಂದ ಪ್ರವೀಣ್ನನ್ನು ಸಂಬಧಿಕರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಪರೀಕ್ಷಿಸಿದ ವೈದ್ಯರು 20 ನಿಮಿಷದ ಹಿಂದೆ ಯುವಕ ತೀರಿಕೊಂಡಿದ್ದಾಗಿ ಹೇಳಿದ್ದಾರೆ. ಈ ವಿಷಯವನ್ನು ತಿಳಿದ ಸಂಬಧಿಕರು ಕಿಮ್ಸ್ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Comments are closed.