ಕರ್ನಾಟಕ

ಸಂವಿಧಾನ ಬದಲು ಮಾಡುತ್ತೇನೆ ಎನ್ನುವ ಬಿಜೆಪಿ ನಾಯಕರಿಗೆ ಕನಿಷ್ಠ ಜ್ಞಾನ ಇಲ್ಲ: ಖರ್ಗೆ

Pinterest LinkedIn Tumblr


ಬೀದರ್: ಸಂವಿಧಾನ ಇಲ್ಲದಿದ್ದರೆ ನರೇಂದ್ರ ಮೋದಿ ಪ್ರಧಾನಿ ಆಗುತ್ತಿರಲಿಲ್ಲ. ಈ ಬಿಜೆಪಿಯವರು ಇದನ್ನು ಬದಲು ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಔರಾದ್‌ನಲ್ಲಿ ನಡೆದ ಕಾಂಗ್ರೆಸ್‌ ನಡಿಗೆ ವಿಜಯದ ಕಡೆಗೆ ಕಾರ್ಯಕ್ರಮದಲ್ಲಿ ಖರ್ಗೆ ಭಾಷಣ ಮಾಡಿದರು.

ಸಂವಿಧಾನ ಎಂಬುವುದೇ ಇಲ್ಲದಿದ್ದರೆ ನಾನು ಕೂಡ ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾಗುತ್ತಿರಲಿಲ್ಲ. ಬಿಜೆಪಿ ನಾಯಕರಿಗೆ ಕನಿಷ್ಠ ಜ್ಞಾನ ಇಲ್ಲ. ಸಂವಿಧಾನ ಬದಲು ಮಾಡುವ ಮಾತನಾಡುತ್ತಿದ್ದಾರೆ ಎಂದು ಟೀಕೆ ಮಾಡಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕರ್ನಾಟಕದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ. ಆ ರಾಜ್ಯದಲ್ಲಿರುವ ಅಪರಾಧ ಪ್ರಕರಣಗಳ ಬಗ್ಗೆ ಅವರು ಗಮನ ಹರಿಸಲಿ ಯುಪಿ ಗೂಂಡಾ ರಾಜ್‌ ಎಂದು ಎಲ್ಲರಿಗೂ ಗೊತ್ತಿದೆ ಎಂದು ಖರ್ಗೆ ತಿಳಿಸಿದರು.

Comments are closed.