
ವಿಜಯಪುರ: ರಾಜ್ಯದಲ್ಲಿ ಪಿಎಫ್ಐ ನಿಷೇಧಿಸುವ ಪ್ರಶ್ನೆಯೇ ಇಲ್ಲ, ಬಿಜೆಪಿಯವರೇ ಅಪರಾಧ ಕೃತ್ಯಗಳಿಗೆ ಪ್ರಚೋದಿಸುತ್ತಿದ್ದಾರೆ. ಬಿಜೆಪಿ ಕ್ರಿಮಿನಲ್ ರಾಜಕೀಯದಿಂದ ಹೊರ ಬರಲಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ್ ಹೇಳಿದ್ದಾರೆ.
ಕರಾವಳಿಯಲ್ಲಿ ನಡೆಯುತ್ತಿರುವ ಕೊಲೆ ಮತ್ತು ಅಪರಾಧ ಪ್ರಕರಣಗಳಲ್ಲಿ ಒಂದು ಕಡೆ ಬಿಜೆಪಿ ಮತ್ತೊಂದು ಕಡೆ ಆರೆಸ್ಸೆಸ್ ಇದೆ. ಜನರನ್ನು ಕೋಮು ಆಧಾರದ ಮೇಲೆ ವಿಭಜಿಸಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಲು ಬಿಜೆಪಿ ಮತ್ತು ಆರೆಸ್ಸೆಸ್ ಪ್ರಯತ್ನಿಸುತ್ತಿವೆ . ಆದರೆ ಕರ್ನಾಟಕದ ಜನತೆ ಜಾಣರಾಗಿದ್ದು, ಕೋಮು ವಿಭಜನೆಯ ತಂತ್ರವನ್ನು ಬಲ್ಲವರು. ಚುನಾವಣೆಯಲ್ಲಿ ಕನ್ನಡಿಗರು ಇದಕ್ಕೆ ಅವಕಾಶ ನೀಡುವುದಿಲ್ಲ ಎಂದರು.
ಹಿಂದೂ ಮೂಲಭೂತವಾದಿಗಳಾಗಲಿ ಬೇರೆ ಯಾರೇ ಕೋಮವಾದಿಗಳಾಗಿರಲಿ ಅವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಮತವಿಲ್ಲ, ಕಳೆದ ಬಾರಿಗಿಂತ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಲಿದೆ ಎಂದರು.
Comments are closed.