ಕರ್ನಾಟಕ

ಜನರ ನಿರೀಕ್ಷೆಗೆ ಪೂರಕ ಬಜೆಟ್: ಸಿದ್ದರಾಮಯ್ಯ

Pinterest LinkedIn Tumblr


ಚಿಕ್ಕಬಳ್ಳಾಪುರ: ಜನರ ನಿರೀಕ್ಷೆಗೆ ಪೂರಕವಾದ ಬಜೆಟ್ ಮಂಡನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಾಗೇಪಲ್ಲಿಯಲ್ಲಿ ಭಾನುವಾರ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯೋಜನೆ ಮಾಡಿದ್ದ ಸಾಮೂಹಿಕ ‌ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರದ ಅನುದಾನ ಖರ್ಚಿನ ಬಗ್ಗೆ ಬಿಜೆಪಿ ಅಧಿವೇಶನದಲ್ಲಿ ಕೇಳಲಿ ಉತ್ತರ ನೀಡುತ್ತೇವೆ ಎಂದರು.

ಹೈಕಮಾಂಡ್​ಗೆ ಕಪ್ಪ ಕಾಣಿಕೆ ನೀಡುವ ವಿಚಾರ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ತಾಕತ್ತಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು. ಚಾಮಂಡೇಶ್ವರಿ ಕ್ಷೇತ್ರದಿಂದ ತಮ್ಮ ಸ್ಪರ್ಧೆ ಖಚಿತ. ಮಾಧ್ಯಮದಲ್ಲಿ ಬರುವ ಎಲ್ಲಾ ಸುದ್ದಿಗಳು ಸತ್ಯವೇನಲ್ಲ. ವದಂತಿಗಳಿಗೆಲ್ಲಾ ಉತ್ತರ ಹೇಳೋದಿಕ್ಕೆ ಆಗಲ್ಲ ಎಂದರು.

Comments are closed.