ಕರ್ನಾಟಕ

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ: ಭಕ್ತರಿಗೆ ದರ್ಶನ ನೀಡಿದ ನಡೆದಾಡುವ ದೇವರು

Pinterest LinkedIn Tumblr


ತುಮಕೂರು: ಪಿತ್ತನಾಳದ ಸೋಂಕಿಗೆ ಚಿಕಿತ್ಸೆ ಪಡೆದು ಮಠಕ್ಕೆ ಮರಳಿರುವ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಭಾನುವಾರ ಮುಂಜಾನೆ ಎಂದಿನಂತೆ ಶಿವಪೂಜೆ ನೆರವೇರಿಸಿದ್ದಾರೆ.

ಮುಂಜಾನೆ ಸ್ವಾಮೀಜಿ ಇಡ್ಲಿ ಮತ್ತು ಹಣ್ಣಿನ ರಸ ಸೇವಿಸಿದ್ದಾರೆ. ಮಠದ ವೈದ್ಯರು ಶ್ರೀಗಳ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯರ ಸೂಚನೆ ಮೇರೆಗೆ ಸಾರ್ವಜನಿಕ ದರ್ಶನಕ್ಕೆ ನಿರ್ಬಂಧ ಹೇರಲಾಗಿತ್ತು.

ಆದರೆ ಇಂದು ಮುಂಜಾನೆ ಶ್ರೀಗಳು ಭಕ್ತರನ್ನು ಭೇಟಿಯಾಗುವ ಆಸೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಿರಿಯ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಯವರು ಮಠದಲ್ಲಿ ಶ್ರೀಗಳ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

Comments are closed.