ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕನನ್ನು ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಅಪಹರಿಸಿಕೊಂಡು ಹೋಗಿರುವ ಘಟನೆ ಮಾಗಡಿ ರಸ್ತೆಯ ಮಂಜುನಾಥ್ ನಗರದಲ್ಲಿ ನಡೆದಿದೆ.
ತಾಯಿಯ ಹುಟ್ಟುಹಬ್ಬದ ದಿನವೇ ಮನೆಯ ಹೊರಗೆ ಆಟವಾಡುತ್ತಿದ್ದ ಪುಟ್ಟ ಮಗು ಚಂದನ್ ನನ್ನು ಇಬ್ಬರು ಅಪರಿಚಿತರು ಬೈಕ್ ನಲ್ಲಿ ಬಂದು ಕಿಡ್ನಾಪ್ ಮಾಡಿರುವುದಾಗಿ ವರದಿ ತಿಳಿಸಿದೆ.
ಭಾನುವಾರ ರಾತ್ರಿ ದೂರವಾಣಿ ಕರೆ ಮಾಡಿ 35 ಸಾವಿರ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದು, ಸೋಮವಾರ ಬೆಳಗ್ಗೆ 35 ಲಕ್ಷ ರೂಪಾಯಿ ಕೊಡಬೇಕೆಂದು ಬೆದರಿಕೆ ಹಾಕಿರುವುದಾಗಿ ವರದಿ ವಿವರಿಸಿದೆ.
ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
-ಉದಯವಾಣಿ
Comments are closed.