ನಾಗಮಂಗಲ: ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು. ಪಕ್ಷ ಉಳಿಯಬೇಕು. ಅದೇ ನನ್ನ ಜೀವನದ ಕೊನೆಯ ಆಸೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.
ತಾಲೂಕಿನ ಟಿ.ನೇರಳೇಕೆರೆ ಗ್ರಾಮದ ಶ್ರೀ ಮಲ್ಲೇಶ್ವರನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಭಾನುವಾರ ಕಸಬಾ ಹೋಬಳಿ ಮಟ್ಟದ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.
ನನಗೆ ಈಶ್ವರನ ಅನುಗ್ರಹವಿದೆ. ದೈವ ಕೃಪೆಯಿಲ್ಲದೆ ನಾನೇನೂ ಮಾಡುವುದಿಲ್ಲ. ದೈವಾನುಗ್ರಹದಿಂದ ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆ ಸಾಧ್ಯವಾಗಿದೆ. 56 ವರ್ಷದ ರಾಜಕೀಯ ಜೀವನದಲ್ಲಿ ಹಲವಾರು ಏಳು-ಬೀಳುಗಳನ್ನು ಕಂಡಿದ್ದೇನೆ. ರಾಜಕಾರಣದಲ್ಲಿ ಕಳಂಕರಹಿತವಾಗಿ ಜೀವನ ನಡೆಸಿಕೊಂಡು ಬಂದಿದ್ದೇನೆ ಎಂದು ಹೇಳಿದರು.
ಕಾವೇರಿ ತೀರ್ಪಿನ ಬಗ್ಗೆ ಆತಂಕ: ಇನ್ನೆರಡು ವಾರದಲ್ಲಿ ಹೊರಬೀಳಲಿರುವ ಕಾವೇರಿ ತೀರ್ಪು ನನ್ನಲ್ಲಿ ಆತಂಕ ಮೂಡಿಸಿದ್ದು, ದೇಶದ ನ್ಯಾಯಾಂಗ ವ್ಯವಸ್ಥೆ ವಿರುದ್ಧ ತಿರುಗಿ ಬಿದ್ದಿದ್ದ ನಾಲ್ವರು ಸುಪ್ರೀಂಕೋರ್ಟ್ ನ್ಯಾಯಾಧೀಶರು ಕಾವೇರಿ ವಿಚಾರವಾಗಿ ತೀರ್ಪು ನೀಡಲಿದ್ದಾರೆ. ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ದೊರಕಿಸುವಲ್ಲಿ ಕಾಂಗ್ರೆಸ್, ಬಿಜೆಪಿ ವಿಫಲವಾಗಿವೆ ಎಂದು ಆರೋಪಿಸಿದರು.
-ಉದಯವಾಣಿ
Comments are closed.