ಕರ್ನಾಟಕ

ಸಂತೋಷ್‌ ಕುಟುಂಬಕ್ಕೆ ಸರಕಾರಿ ಕೆಲಸ : ಬಿಎಸ್‌ವೈ

Pinterest LinkedIn Tumblr


ಬೆಂಗಳೂರು: ನಾನಾ ಕಡೆ ಸಂತೋಷ್‌ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂತೋಷ್‌ ಕುಟುಂಬದ ಒಬ್ಬರಿಗೆ ಸರಕಾರಿ ನೌಕರಿ ಕೊಡಿಸುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಸಂತೋಷ್ ಅವರ ಮನೆಗೆ ಭೇಟಿ ನೀಡಿದ ಯಡಿಯೂರಪ್ಪ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಿದರು. ಆನಂದರಾವ್ ವೃತ್ತದ ಬಳಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಆಗ್ರಹಿಸಿದರು. ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ವಿಜಯ ಕುಮಾರ್, ಮಾಜಿ ಶಾಸಕ ಕಟ್ಟ ಸುಬ್ರಮಣ್ಯ ನಾಯ್ಡು ಸೇರಿದಂತೆ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಮನಗರದ ಜಿಲ್ಲಾಡಳಿತ ಭವನದ ಮುಂದೆ ಬಿಜೆಪಿ ಕಾರ್ಯಕರ್ತರು, ಮುಖಂಡರು ಪ್ರತಿಭಟಿಸಿದರು. ಹಾಸನದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ವ್ಯವಸ್ಥೆ ಹಾಗೂ ಬಿಜೆಪಿ ಕಾರ್ಯಕರ್ತರ ನಿರಂತರ ಹತ್ಯೆಯ ವಿರುದ್ಧ ಅಕ್ರೋಶ ವ್ಯಕ್ತಪಡಿಸಿ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Comments are closed.